ಆದರೆ, ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖ ಮಾಡದ ಅಂಶಗಳನ್ನು ರಾಹುಲ್ ಹೇಳಿದ್ದಾರೆ ಎಂದು ಆರೋಪಿಸಿತ್ತು. ಇದು ನ್ಯಾಯಾಂಗ ನಿಂದನೆಯಾಗಲಿದೆ ಎಂದಿತ್ತು. ಅಷ್ಟೇ ಅಲ್ಲ, ಬಿಜೆಪಿಯ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.