ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ಇಲ್ಲ: ಕಮಲನಾಥ್‌

Last Updated 4 ಮಾರ್ಚ್ 2020, 4:59 IST
ಅಕ್ಷರ ಗಾತ್ರ

ಭೋಪಾಲ್‌: ‘ತಮ್ಮ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಮಂಗಳವಾರ ಹೇಳಿದರು. ವಿರೋಧಪಕ್ಷ ಬಿಜೆಪಿ ತನ್ನ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.‌

‘ನಮಗೆ ದೊಡ್ಡ ಮೊತ್ತದ ಆಮಿಷ ಒಡ್ಡಲಾಗುತ್ತಿದೆ ಎಂದು ನಮ್ಮ ಶಾಸಕರು ಹೇಳುತ್ತಿದ್ದಾರೆ. ಉಚಿತವಾಗಿ ಕೊಡುವುದಿದ್ದರೆ ಆ ಹಣವನ್ನು ತೆಗೆದುಕೊಳ್ಳಿ ಎಂದು ನಾನು ಶಾಸಕರಿಗೆ ತಿಳಿಸಿದ್ದೇನೆ‌’ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಕಮಲ್‌ನಾಥ್‌ ತಿಳಿಸಿದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್‌ ಅವರು ಸೋಮವಾರ, ‘ನಮ್ಮಪಕ್ಷದ ಶಾಸಕರಿಗೆ ಬಿಜೆಪಿಯ ದೊಡ್ಡ ಮೊತ್ತದ ಆಮಿಷ ಒಡ್ಡುತ್ತಿದ್ದು, ಸರ್ಕಾರದ ಪತನಕ್ಕೆ ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT