ನವದೆಹಲಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ಅಂತಿಮಗೊಳಿಸಲು ನೀಡಿರುವ ಜುಲೈ 31ರ ಗಡುವನ್ನು ವಿಸ್ತರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟಪಡಿಸಿದೆ.
ಎನ್ಆರ್ಸಿಗೆ ಸಂಬಂಧಿಸಿದ ಆಕ್ಷೇಪಗಳನ್ನು ನಿರ್ವಹಿಸುವ ವಿಚಾರದಲ್ಲಿ ಸಂಯೋಜಕ ಪ್ರತೀಕ್ ಹಜೇಲ ಅವರಿಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಆರ್.ಎಫ್. ನರಿಮನ್ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಪೂರ್ಣ ಸ್ವಾತಂತ್ರ್ಯನೀಡಿತ್ತು.