‘ನೆರೂಲ್ನಲ್ಲಿ 2ರಿಂದ 3 ಎಕರೆ ಜಾಗವನ್ನು ಮಂಜೂರು ಮಾಡುವಂತೆ ಪತ್ರ ಬಂದಿರುವುದು ನಿಜ’ ಎಂದು ನಗರ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಗಳು ಖಚಿತಪಡಿಸಿವೆ. ಆದರೆ ಇಂಥ ಪತ್ರ ಬರೆದಿಲ್ಲ ಎಂದು ಗೃಹಸಚಿವಾಲಯವು ಹೇಳಿದೆ. ಕೇಂದ್ರ ಸರ್ಕಾರವು ಈ ಹಿಂದೆ ನೀಡಿದ ಸೂಚನೆಯ ಪ್ರಕಾರ ಎಲ್ಲಾ ವಲಸೆ ಕೇಂದ್ರಗಳಲ್ಲಿ ವಲಸಿಗರ ಬಂಧನ ಕೇಂದ್ರಗಳನ್ನು ನಿರ್ಮಿಸುವುದು ಅಗತ್ಯವಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.