ರಾಜ್ಯದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಅವರು ಆಗಸ್ಟ್ 5ರಂದು ಶ್ರೀನಗರಕ್ಕೆ ತೆರಳಿದ್ದರು. ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ವಿಶೇಷ ಸ್ಥಾನಮಾನ ರದ್ದು ನಿರ್ಧಾರವನ್ನು ರಾಜ್ಯಸಭೆಯಲ್ಲಿ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಡೊಭಾಲ್ ಅವರು ಶ್ರೀನಗರ ತಲುಪಿದ್ದರು. ನಂತರ ಈವರೆಗೆ ಕಾಶ್ಮೀರದ ಹಲವು ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಗ್ರಪೀಡಿತ ದಕ್ಷಿಣ ಕಾಶ್ಮೀರದ ಶೋಪಿಯಾನ್ಗೂ ಅವರು ಭೇಟಿ ನೀಡಿದ್ದರು.