<p><strong>ನವದೆಹಲಿ:</strong> ದೇಶದಲ್ಲಿ ಇದುವರೆಗೆ 107 ಮಂದಿಯಲ್ಲಿ <a href="https://www.prajavani.net/tags/covid-19" target="_blank">ಕೋವಿಡ್ 19</a> ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.</p>.<p>ಮಾರ್ಚ್15ರ ಮಧ್ಯಾಹ್ನ12ಗಂಟೆವರೆಗೂ ಲಭ್ಯವಾದ ಮಾಹಿತಿ ಪ್ರಕಾರವಿದೇಶಿಗರು ಸೇರಿದಂತೆ ದೇಶದಾದ್ಯಂತ 107 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆಎಂದು ಹೇಳಿದೆ.</p>.<p>ಕೋವಿಡ್-19ನಿಂದಾಗಿ ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 31 ಜನರು ಸೋಂಕಿತರಾಗಿರುವುದು ತಿಳಿದುಬಂದಿದೆ.</p>.<p>ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾರಣಾಂತಿಕ ವೈರಸ್ ಅನ್ನು 'ಅಧಿಸೂಚಿತ ವಿಪತ್ತು' ಎಂದು ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/234-indians-from-coronavirus-hit-iran-reach-india-712428.html" itemprop="url">ಕೋವಿಡ್-19: ಇರಾನ್ನಲ್ಲಿ ಸಿಲುಕಿದ್ದ 234 ನಾಗರಿಕರು ಭಾರತಕ್ಕೆ ಸ್ಥಳಾಂತರ </a></p>.<p>ಈ ಕಾಯಿಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ವಿಪತ್ತು ಪರಿಹಾರ ನಿಧಿಯನ್ನು (ಎಸ್ಡಿಆರ್ಎಫ್) ಬಳಸುವಂತೆ ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ಸೂಚಿಸಿದೆ. ಅಗತ್ಯವಿರುವ ಉಪಕರಣಗಳು ಮತ್ತು ವೈರಸ್ ಸೋಂಕಿಗೆ ಒಳಗಾಗಿರುವವರನ್ನು ಪ್ರತ್ಯೇಕವಾಗಿಸಿ ಸೌಲಭ್ಯಗಳನ್ನು ಕಲ್ಪಿಸಲು ಈ ನಿಧಿ ಬಳಸಬಹುದು ಎಂದು ಕೇಂದ್ರ ತಿಳಿಸಿದೆ.</p>.<p>2020 ರ ಜೂನ್ 30 ರವರೆಗೆ ಅಗತ್ಯ ಸರಕುಗಳ ಕಾಯ್ದೆಯಡಿ ಮುಖಗವುಸುಗಳು ಮತ್ತು ಹ್ಯಾಂಡ್ ಸ್ಯಾನಿಟೈಜರ್ಗಳನ್ನು ಅಗತ್ಯ ಸರಕುಗಳೆಂದು ಕೇಂದ್ರ ಸರ್ಕಾರ ಘೋಷಿಸಿದೆ. ಅಗತ್ಯ ಸರಕುಗಳ ಕಾಯಿದೆಯಡಿ, ಪೂರೈಕೆ ಸರಪಳಿಯನ್ನು ಸುಗಮಗೊಳಿಸಲು ರಾಜ್ಯಗಳು ಈ ವಸ್ತುಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ತಯಾರಕರನ್ನು ಕೇಳಬಹುದು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/coronavirus-impact-on-state-economy-712400.html" itemprop="url">ರಾಜ್ಯದ ಆರ್ಥಿಕತೆಗೆ ಕೊರೊನಾ ಪೆಟ್ಟು </a></p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಚೀನಾದ ವುಹಾನ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. </p>.<p>ಚೀನಾದ ನಂತರ ಅತಿಹೆಚ್ಚಿನ ಜನರು ಇಟಲಿಯಲ್ಲಿ ಕೋವಿಡ್-19ಗೆ ಬಲಿಯಾಗಿದ್ದಾರೆ. ಅಂದರೆ 1,441 ಜನರು ಮೃತಪಟ್ಟಿದ್ದು, 21,157 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಟಲಿ ನಂತರ ಸ್ಪೇನ್ನಲ್ಲಿ 1,500 ಹೊಸ ಪ್ರಕರಣಗಳೊಂದಿಗೆ 5,753 ಜನರಿಗೆ ಸೋಂಕು ತಗುಲಿದ್ದು, 183 ಜನರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಇದುವರೆಗೆ 107 ಮಂದಿಯಲ್ಲಿ <a href="https://www.prajavani.net/tags/covid-19" target="_blank">ಕೋವಿಡ್ 19</a> ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.</p>.<p>ಮಾರ್ಚ್15ರ ಮಧ್ಯಾಹ್ನ12ಗಂಟೆವರೆಗೂ ಲಭ್ಯವಾದ ಮಾಹಿತಿ ಪ್ರಕಾರವಿದೇಶಿಗರು ಸೇರಿದಂತೆ ದೇಶದಾದ್ಯಂತ 107 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆಎಂದು ಹೇಳಿದೆ.</p>.<p>ಕೋವಿಡ್-19ನಿಂದಾಗಿ ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 31 ಜನರು ಸೋಂಕಿತರಾಗಿರುವುದು ತಿಳಿದುಬಂದಿದೆ.</p>.<p>ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾರಣಾಂತಿಕ ವೈರಸ್ ಅನ್ನು 'ಅಧಿಸೂಚಿತ ವಿಪತ್ತು' ಎಂದು ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/234-indians-from-coronavirus-hit-iran-reach-india-712428.html" itemprop="url">ಕೋವಿಡ್-19: ಇರಾನ್ನಲ್ಲಿ ಸಿಲುಕಿದ್ದ 234 ನಾಗರಿಕರು ಭಾರತಕ್ಕೆ ಸ್ಥಳಾಂತರ </a></p>.<p>ಈ ಕಾಯಿಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ವಿಪತ್ತು ಪರಿಹಾರ ನಿಧಿಯನ್ನು (ಎಸ್ಡಿಆರ್ಎಫ್) ಬಳಸುವಂತೆ ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ಸೂಚಿಸಿದೆ. ಅಗತ್ಯವಿರುವ ಉಪಕರಣಗಳು ಮತ್ತು ವೈರಸ್ ಸೋಂಕಿಗೆ ಒಳಗಾಗಿರುವವರನ್ನು ಪ್ರತ್ಯೇಕವಾಗಿಸಿ ಸೌಲಭ್ಯಗಳನ್ನು ಕಲ್ಪಿಸಲು ಈ ನಿಧಿ ಬಳಸಬಹುದು ಎಂದು ಕೇಂದ್ರ ತಿಳಿಸಿದೆ.</p>.<p>2020 ರ ಜೂನ್ 30 ರವರೆಗೆ ಅಗತ್ಯ ಸರಕುಗಳ ಕಾಯ್ದೆಯಡಿ ಮುಖಗವುಸುಗಳು ಮತ್ತು ಹ್ಯಾಂಡ್ ಸ್ಯಾನಿಟೈಜರ್ಗಳನ್ನು ಅಗತ್ಯ ಸರಕುಗಳೆಂದು ಕೇಂದ್ರ ಸರ್ಕಾರ ಘೋಷಿಸಿದೆ. ಅಗತ್ಯ ಸರಕುಗಳ ಕಾಯಿದೆಯಡಿ, ಪೂರೈಕೆ ಸರಪಳಿಯನ್ನು ಸುಗಮಗೊಳಿಸಲು ರಾಜ್ಯಗಳು ಈ ವಸ್ತುಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ತಯಾರಕರನ್ನು ಕೇಳಬಹುದು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/coronavirus-impact-on-state-economy-712400.html" itemprop="url">ರಾಜ್ಯದ ಆರ್ಥಿಕತೆಗೆ ಕೊರೊನಾ ಪೆಟ್ಟು </a></p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಚೀನಾದ ವುಹಾನ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. </p>.<p>ಚೀನಾದ ನಂತರ ಅತಿಹೆಚ್ಚಿನ ಜನರು ಇಟಲಿಯಲ್ಲಿ ಕೋವಿಡ್-19ಗೆ ಬಲಿಯಾಗಿದ್ದಾರೆ. ಅಂದರೆ 1,441 ಜನರು ಮೃತಪಟ್ಟಿದ್ದು, 21,157 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಟಲಿ ನಂತರ ಸ್ಪೇನ್ನಲ್ಲಿ 1,500 ಹೊಸ ಪ್ರಕರಣಗಳೊಂದಿಗೆ 5,753 ಜನರಿಗೆ ಸೋಂಕು ತಗುಲಿದ್ದು, 183 ಜನರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>