ಭುವನೇಶ್ವರ: ಒಡಿಶಾದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಬಿಜು ಜನತಾದಳ (ಬಿಜೆಡಿ) ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯ ಸಮರ್ಪಕ ಅನುಷ್ಠಾನಕ್ಕೆ ಬದ್ಧತೆ ತೋರಿದೆ.
ಪ್ರಣಾಳಿಕೆಯಲ್ಲಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲ ಸಚಿವರು ತಮ್ಮ ಇಲಾಖೆಯ ಪ್ರತಿ ತಿಂಗಳ ಪ್ರಗತಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರ ಆದೇಶಿಸಿದ್ದಾರೆ.
ಎಲ್ಲ ಸಚಿವರು ಪ್ರತಿ ತಿಂಗಳು ವರದಿಯನ್ನು ಸಿಎಂಗೆ ಸಲ್ಲಿಸಬೇಕು ಎಂಬ ಆದೇಶವಿದೆ. ಪಕ್ಷದ ಚುನಾವಣಾ ಪ್ರಣಾಳಿಕೆಯೇ ಮುಂದಿನ ಐದು ವರ್ಷಗಳವರೆಗೆ ಸರ್ಕಾರದ ಕಾರ್ಯಕ್ರಮಗಳಾಗಿರುತ್ತವೆ ಎಂದು ಮೇ 29ರಂದು ನಡೆದ ಮೊದಲ ಸಂಪುಟ ಸಭೆಯಲ್ಲಿ ನಿರ್ಣಯತೆಗೆದುಕೊಳ್ಳಲಾಗಿದೆ.