ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಇದು ಹಲವು ಪೋಷಕರ ಆರ್ಥಿಕ ಪರಿಸ್ಥಿತಿಯ ಮೇಲೆ ದುಷ್ಪರಿಣಾಮ ಬೀರಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶುಲ್ಕ ಪಾವತಿಸುವುದನ್ನು ಮುಂದೂಡಬೇಕು. ಸಾಧ್ಯವಾದರೆ ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಪಟ್ನಾಯಕ್ ಟ್ವೀಟ್ನಲ್ಲಿ ಸಲಹೆ ನೀಡಿದ್ದಾರೆ.