<p><strong>ಪಾಟ್ನಾ: </strong>ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್–19 ತಗುಲಿರುವುದು ದೃಢಪಟ್ಟಿದೆ.</p>.<p>ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.</p>.<p>ಆದರೆ, ಮುಜಾಫರ್ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ ಶಾಹಿ ಲಿಚ್ಚಿ ಹಣ್ಣುಗಳ ಬುಟ್ಟಿಗಳನ್ನು ಸುರಕ್ಷಿತವಾಗಿ, ಸಕಾಲದಲ್ಲಿ ಬಿಹಾರ ಭವನಕ್ಕೆ ತಲುಪಿಸುವ ಹೊಣೆ ಒಪ್ಪಿಸಲಾಗಿತ್ತು ಎಂದು ತಿಳಿಸಿದೆ.</p>.<p>‘ದೆಹಲಿಯಲ್ಲಿ ಪ್ರಮುಖರಿಗೆ ಈ ಹಣ್ಣುಗಳ ಬುಟ್ಟಿಗಳನ್ನು ತಲುಪಿಸುವಲ್ಲಿ ಈ ಅಧಿಕಾರಿಯ ಪಾತ್ರವಿರಲಿಲ್ಲ. ಆ ಹೊಣೆಯನ್ನು ನವದೆಹಲಿಯಲ್ಲಿ ಬಿಹಾರ ಭವನದ ಅಧಿಕಾರಿಗಳು ನಿರ್ವಹಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ಪ್ರಸಾದ್ ಸಿಂಗ್ ವಿವರಣೆ ನೀಡಿದ್ದಾರೆ.</p>.<p>ಸಾರ್ವಜನಿಕ ಸಂಪರ್ಕ ಇಲಾಖೆಯೂ, ‘ಈ ಅಧಿಕಾರಿಯು ಜೂನ್ 9ರಂದು ಹಣ್ಣುಗಳ ಬುಟ್ಟಿಗಳನ್ನು ನವದೆಹಲಿಗೆ ಒಯ್ದಿದ್ದರು. ವಿತರಣೆಯಲ್ಲಿ ಈ ಅಧಿಕಾರಿಯ ಪಾತ್ರವೇನೂ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದೆ.</p>.<p>ಪಾಟ್ನಾಗೆ ಮರಳಿದ ಬಳಿಕ ಅನಾರೋಗ್ಯ ಪೀಡಿತರಾಗಿದ್ದರು. ಮಾದರಿ ಪರೀಕ್ಷೆಯ ವೇಳೆ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತು. ಹೀಗಾಗಿ, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲುಪಡಿಸಲಾಗಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಟ್ನಾ: </strong>ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್–19 ತಗುಲಿರುವುದು ದೃಢಪಟ್ಟಿದೆ.</p>.<p>ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.</p>.<p>ಆದರೆ, ಮುಜಾಫರ್ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ ಶಾಹಿ ಲಿಚ್ಚಿ ಹಣ್ಣುಗಳ ಬುಟ್ಟಿಗಳನ್ನು ಸುರಕ್ಷಿತವಾಗಿ, ಸಕಾಲದಲ್ಲಿ ಬಿಹಾರ ಭವನಕ್ಕೆ ತಲುಪಿಸುವ ಹೊಣೆ ಒಪ್ಪಿಸಲಾಗಿತ್ತು ಎಂದು ತಿಳಿಸಿದೆ.</p>.<p>‘ದೆಹಲಿಯಲ್ಲಿ ಪ್ರಮುಖರಿಗೆ ಈ ಹಣ್ಣುಗಳ ಬುಟ್ಟಿಗಳನ್ನು ತಲುಪಿಸುವಲ್ಲಿ ಈ ಅಧಿಕಾರಿಯ ಪಾತ್ರವಿರಲಿಲ್ಲ. ಆ ಹೊಣೆಯನ್ನು ನವದೆಹಲಿಯಲ್ಲಿ ಬಿಹಾರ ಭವನದ ಅಧಿಕಾರಿಗಳು ನಿರ್ವಹಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ಪ್ರಸಾದ್ ಸಿಂಗ್ ವಿವರಣೆ ನೀಡಿದ್ದಾರೆ.</p>.<p>ಸಾರ್ವಜನಿಕ ಸಂಪರ್ಕ ಇಲಾಖೆಯೂ, ‘ಈ ಅಧಿಕಾರಿಯು ಜೂನ್ 9ರಂದು ಹಣ್ಣುಗಳ ಬುಟ್ಟಿಗಳನ್ನು ನವದೆಹಲಿಗೆ ಒಯ್ದಿದ್ದರು. ವಿತರಣೆಯಲ್ಲಿ ಈ ಅಧಿಕಾರಿಯ ಪಾತ್ರವೇನೂ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದೆ.</p>.<p>ಪಾಟ್ನಾಗೆ ಮರಳಿದ ಬಳಿಕ ಅನಾರೋಗ್ಯ ಪೀಡಿತರಾಗಿದ್ದರು. ಮಾದರಿ ಪರೀಕ್ಷೆಯ ವೇಳೆ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತು. ಹೀಗಾಗಿ, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲುಪಡಿಸಲಾಗಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>