ಕಳೆದ ವರ್ಷ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಒಮರ್ ಅಬ್ದುಲ್ಲಾ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಅವರ ಬಂಧನ ಅವಧಿಯನ್ನು ವಿಸ್ತರಿಸುವ ಸಲುವಾಗಿ ಅವರ ವಿರುದ್ಧ ಪಿಎಸ್ಎ ಕಾಯ್ದೆ ಪ್ರಯೋಗಿಸಲಾಗಿತ್ತು.