‘ಸಂಸದರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ರಾಷ್ಟ್ರಕ್ಕಾಗಿ ದುಡಿದವರನ್ನು ಇದೀಗ ರಾಷ್ಟ್ರಕ್ಕೆ ಅಪಾಯ ಎನ್ನುವ ರೀತಿಯಲ್ಲಿ ನೋಡಲಾಗುತ್ತಿದೆ. ಬಂಧನದ ಸಂದರ್ಭದಲ್ಲಿ ನೀಡಿದ ಕಾರಣಗಳೂ ಅನುಮಾನ ಹುಟ್ಟಿಸುವಂತಿವೆ. ಬಂಧನದ ಆದೇಶವೇ ಕಾನೂನಿಗೆ ವಿರುದ್ಧವಾಗಿದೆ. ಹೀಗಾಗಿ ನ್ಯಾಯಾಲಯವು ಪಿಎಸ್ಎ ಅಡಿ ಬಂಧನಕ್ಕೆ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಸಾರಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.