<p><strong>ನವದೆಹಲಿ:</strong> ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶನಿವಾರ (ಮೇ 30) ಒಂದು ವರ್ಷ ಪೂರೈಸಲಿದೆ. ಆದರೆ, ಜಗತ್ತನ್ನೇ ಕಾಡುತ್ತಿರುವ ಕೋವಿಡ್–19ರ ಕಾರಣದಿಂದಾಗಿ ಬಿಜೆಪಿಗೆ ಬಹಿರಂಗವಾಗಿ ಸಂಭ್ರಮಿಸಲು ಸಾಧ್ಯವಾಗದಂಥ ಸ್ಥಿತಿ ಇದೆ.</p>.<p>ಪಕ್ಷವು ಈ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದು, ಮುಂದಿನ ಒಂದು ತಿಂಗಳ ಕಾಲ ಫೇಸ್ಬುಕ್ ಲೈವ್ನಂಥ ‘ಡಿಜಿಟಲ್ ರ್ಯಾಲಿ’ಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರನ್ನು ತಲುಪಲು ಯೋಜನೆ ರೂಪಿಸಿದೆ. ಇದೇ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳ ಆರೋಪ– ಪ್ರತ್ಯಾರೋಪ ರಾಜಕೀಯವೂ ಬಿರುಸುಗೊಂಡಿದೆ.</p>.<p>ವಿರೋಧ ಪಕ್ಷಗಳು ಬಿಜೆಪಿ ವಿರುದ್ಧದ ಟೀಕೆಗಳನ್ನು ತೀವ್ರಗೊಳಿಸಲು ಮುಂದಾಗಿವೆ. ದೇಶದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ಆಗುತ್ತಿರುವ ಲೋಪ, ನಿರುದ್ಯೋಗ ಸಮಸ್ಯೆ ಉಲ್ಬಣ ಹಾಗೂ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿಯ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸಿವೆ.</p>.<p>ಇದಕ್ಕೆ ಪ್ರತಿಯಾಗಿ ಬಿಜೆಪಿಯು ಕಿರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶವನ್ನು ‘ದುರ್ಬಲಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶನಿವಾರ (ಮೇ 30) ಒಂದು ವರ್ಷ ಪೂರೈಸಲಿದೆ. ಆದರೆ, ಜಗತ್ತನ್ನೇ ಕಾಡುತ್ತಿರುವ ಕೋವಿಡ್–19ರ ಕಾರಣದಿಂದಾಗಿ ಬಿಜೆಪಿಗೆ ಬಹಿರಂಗವಾಗಿ ಸಂಭ್ರಮಿಸಲು ಸಾಧ್ಯವಾಗದಂಥ ಸ್ಥಿತಿ ಇದೆ.</p>.<p>ಪಕ್ಷವು ಈ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದು, ಮುಂದಿನ ಒಂದು ತಿಂಗಳ ಕಾಲ ಫೇಸ್ಬುಕ್ ಲೈವ್ನಂಥ ‘ಡಿಜಿಟಲ್ ರ್ಯಾಲಿ’ಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರನ್ನು ತಲುಪಲು ಯೋಜನೆ ರೂಪಿಸಿದೆ. ಇದೇ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳ ಆರೋಪ– ಪ್ರತ್ಯಾರೋಪ ರಾಜಕೀಯವೂ ಬಿರುಸುಗೊಂಡಿದೆ.</p>.<p>ವಿರೋಧ ಪಕ್ಷಗಳು ಬಿಜೆಪಿ ವಿರುದ್ಧದ ಟೀಕೆಗಳನ್ನು ತೀವ್ರಗೊಳಿಸಲು ಮುಂದಾಗಿವೆ. ದೇಶದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ಆಗುತ್ತಿರುವ ಲೋಪ, ನಿರುದ್ಯೋಗ ಸಮಸ್ಯೆ ಉಲ್ಬಣ ಹಾಗೂ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿಯ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸಿವೆ.</p>.<p>ಇದಕ್ಕೆ ಪ್ರತಿಯಾಗಿ ಬಿಜೆಪಿಯು ಕಿರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶವನ್ನು ‘ದುರ್ಬಲಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>