ಈರುಳ್ಳಿ ಬೆಲೆ ಮೇಲೆ ನಿಗಾ ವಹಿಸಲು ಹಾಗೂ ಅದು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳುವ ಸಲುವಾಗಿ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ಗ್ರಾಹಕ ವ್ಯವಹಾರ ಸಚಿವ ರಾಮ್ವಿಲಾಸ್ ಪಾಸ್ವಾನ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನೊಳಗೊಂಡ ಸಚಿವರ ತಂಡವನ್ನು ಕೇಂದ್ರ ಸರ್ಕಾರ ರಚಿಸಿದೆ.