ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಮಳೆ: ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರದವರೆಗೂ ಬಂದ್‌

Last Updated 9 ಆಗಸ್ಟ್ 2019, 2:23 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ಕೆಲವೆಡೆ ಭಾರಿ ಮಳೆಯಾಗುತ್ತಿದ್ದುಕೊಚ್ಚಿ ವಿಮಾನ ನಿಲ್ದಾಣವನ್ನು ಭಾನುವಾರ(ಆ.11)ದವರೆಗೂಬಂದ್‌ ಮಾಡಲಾಗಿದೆ.

ಪೆರಿಯಾರ್ ನದಿಅಪಾಯಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೂಬಂದ್‌ ಮಾಡಲಾಗಿದೆ ಎಂದು ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಇಡುಕ್ಕಿ, ಮಲ‍ಪ್ಪುರಂ, ಕೊಯಿಕೋಡ್‌,ಕಣ್ಣೂರು, ವಯನಾಡ್‌ ಜಿಲ್ಲೆಗಳಲ್ಲಿ ’ರೆಡ್‌ ಅಲರ್ಟ್‌‘ ಘೋಷಣೆ ಮಾಡಲಾಗಿದೆ.ಜಿಲ್ಲೆಯಲ್ಲಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಾಗಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ.

ಕೇರಳದ 12 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಳೆದ ಜೂನ್‌ 6ರಿಂದ ಆರಂಭವಾದ ಮುಂಗಾರಿಗೆ ಇಲ್ಲಿಯವರೆಗೆ ರಾಜ್ಯದಲ್ಲಿ 29 ಜನರು ಸತ್ತಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT