ಚಿಕ್ಕೋಡಿ: ಬೇಸಿಗೆ ಆರಂಭವಾಗುತ್ತಿದ್ದಂತೆ ತಾಲ್ಲೂಕಿನ ಜೀವನದಿ ಕೃಷ್ಣೆಯ ಒಡಲು ಬರಿದಾಗುತ್ತಿದ್ದು, ಕುಡಿಯುವ ನೀರಿನ ಅಭಾವ ಎದುರಾಗುವ ಆತಂಕ ಮೂಡಿದೆ. ಈಗಿರುವ ನೀರಿನಲ್ಲಿ ನೀರ್ಬಳ್ಳಿ ಹಬ್ಬಿಕೊಂಡಿದ್ದು, ಜೀವಜಲ ಕಲುಷಿತವಾಗುತ್ತಿದೆ. ಇಷ್ಟಾದರೂ ಸಂಬಂಧಿತ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ’ ಎಂದು ಈ ಭಾಗದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.