ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ ಮುಖಂಡ ಜಿ. ಸುಧಾಕರ ರೆಡ್ಡಿ ಹಾಗೂ ಡಿ. ರಾಜ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದ ನಾಯ್ಡು, ಅಲ್ಲಿಂದ ಲಖನೌಗೆ ಧಾವಿಸಿ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ಹಾಗೂ ಬಿಎಸ್ಪಿ ನಾಯಕಿ ಮಾಯಾವತಿ ಅವರನ್ನು ಭೇಟಿ ಮಾಡಿದ್ದಾರೆ.