ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌, ಪವಾರ್‌, ಮಾಯಾ ಭೇಟಿಯಾದ ನಾಯ್ಡು

ಬಿರುಸುಗೊಂಡ ರಾಜಕೀಯ ಚಟುವಟಿಕೆ
Last Updated 18 ಮೇ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಬಾಕಿ ಇರುವಂತೆಯೇ ಟಿಡಿಪಿ
ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಸಿಪಿಐ ಮುಖಂಡ ಜಿ. ಸುಧಾಕರ ರೆಡ್ಡಿ ಹಾಗೂ ಡಿ. ರಾಜ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದ ನಾಯ್ಡು, ಅಲ್ಲಿಂದ ಲಖನೌಗೆ ಧಾವಿಸಿ ಎಸ್‌ಪಿ ಮುಖಂಡ ಅಖಿಲೇಶ್‌ ಯಾದವ್‌ ಹಾಗೂ ಬಿಎಸ್‌ಪಿ ನಾಯಕಿ ಮಾಯಾವತಿ ಅವರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿಯೇತರ ಪಕ್ಷಗಳೆಲ್ಲ ಒಂದಾಗಿ ಒಂದು ಬಲಿಷ್ಠ ಮೈತ್ರಿಕೂಟ ಸ್ಥಾಪಿಸುವ ಬಗ್ಗೆ ನಾಯ್ಡು ಅವರು ರಾಹುಲ್‌ ಜೊತೆ
ಚರ್ಚಿಸಿದ್ದಾರೆ. ಈ ಹಿಂದೆಯೇ ನಾಯ್ಡು ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಎಎಪಿ ಮುಖಂಡ ಕೇಜ್ರಿವಾಲ್‌, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಜೊತೆ ಮಾತುಕತೆ ನಡೆಸಿದ್ದರು.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಾಗಬೇಕಾದ ಅನಿವಾರ್ಯತೆಯನ್ನು ವಿವಿಧ ಪಕ್ಷಗಳ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿರುವ ನಾಯ್ಡು, ಎನ್‌ಡಿಎಗೆ ಬಹುಮತ ಬಾರದಿದ್ದ ಪಕ್ಷದಲ್ಲಿ ನಾವೇನು
ಮಾಡಬೇಕು ಎಂಬ ಬಗ್ಗೆ ಯೋಜನೆಯೊಂದನ್ನು ಸಿದ್ಧಪಡಿಸಿಡುವಂತೆ ರಾಹುಲ್‌ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಚುನಾವಣೋತ್ತರ ಸಾಧ್ಯತೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮೇ 23ರಂದು
ವಿರೋಧಪಕ್ಷಗಳ ನಾಯಕರ ಸಭೆಕರೆದಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಚಂದ್ರಬಾಬು ನಾಯ್ಡು ವಿವಿಧ ಪಕ್ಷಗಳ ನಾಯಕರನ್ನು ಭೇಟಿಮಾಡುತ್ತಿದ್ದಾರೆ.

ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷವು ಈಚಿನವರೆಗೂ ಎನ್‌ಡಿಎ ಭಾಗವಾಗಿತ್ತು. ಲೋಕಸಭಾ ಚುನಾವಣೆ ಘೋಷಣೆಯಾಗುವುದಕ್ಕೂಕೆಲವೇ ದಿನಗಳ ಹಿಂದೆ ಟಿಡಿಪಿ ಎನ್‌ಡಿಎಯಿಂದ ಹೊರಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT