ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಎ.ಅಶೋಕ್, ಫಲಿತಾಂಶ ಪ್ರಕಟಣೆಯಲ್ಲಿಗೊಂದಲವಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ‘ಹೆದರಬೇಡಿ, ಸರಿಪಡಿಸುತ್ತೇವೆ. ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ’ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿ, ಶೀಘ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.ಫಲಿತಾಂಶ ಗೊಂದಲಕ್ಕೆ ಮಂಡಳಿಯ ಪರವಾಗಿ ಪರೀಕ್ಷೆ ನಡೆಸುವ ಕಂಪನಿಯೇ ಕಾರಣ ಎಂದು ಅಧಿಕಾರಿಗಳು ದೂರಿದ್ದಾರೆ.