<p class="title"><strong>ನವದೆಹಲಿ:</strong> ಕೇಂದ್ರ ಸರ್ಕಾರದ ಪ್ರಸ್ತಾವಿತ ವಿದ್ಯುತ್ ತಿದ್ದುಪಡಿ ಮಸೂದೆ–2020 ಹಾಗೂ ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣಕ್ಕೆ ಲಕ್ಷಾಂತರ ಉದ್ಯೋಗಿಗಳು ಹಾಗೂ ಎಂಜಿನಿಯರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರ್ಗಳ ಒಕ್ಕೂಟ (ಎಐಪಿಇಎಫ್) ಹೇಳಿದೆ.</p>.<p class="title">ಕೇಂದ್ರಾಡಳಿತ ಪ್ರದೇಶಗಳ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ತಿಂಗಳು ಪ್ರಕಟಿಸಿದ್ದರು. ವಿದ್ಯುತ್ ತಿದ್ದುಪಡಿ ಮಸೂದೆಯ ಕರಡನ್ನು ಏಪ್ರಿಲ್ 17ರಂದು ಸಚಿವಾಲಯ ಬಿಡುಗಡೆ ಮಾಡಿತ್ತು.</p>.<p class="title">‘ಕೇಂದ್ರ ಸರ್ಕಾರದ ಎರಡು ನಿರ್ಧಾರಗಳನ್ನು ಖಂಡಿಸಿ ವಿದ್ಯುತ್ ವಲಯದ ಲಕ್ಷಾಂತರ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು. ಬಹುತೇಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಸಭೆ ನಡೆಸಲಾಯಿತು. ಈ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು’ ಎಂದು ಒಕ್ಕೂಟದ ವಕ್ತಾರ ವಿ.ಕೆ. ಗುಪ್ತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="title">‘ಮಸೂದೆಯು ಅಂಗೀಕಾರಗೊಂಡ ಬಳಿಕ ರೈತರು ತಿಂಗಳಿಗೆ ₹5,000ದಿಂದ ₹6,000 ವಿದ್ಯುತ್ ದರ ಪಾವತಿಸಬೇಕಾಗುತ್ತದೆ. ತಿಂಗಳಿಗೆ 300 ಯೂನಿಟ್ ವಿದ್ಯುತ್ ಬಳಸುವ ಬಳಕೆದಾರರು ಪ್ರತಿ ಯೂನಿಟ್ಗೆ ₹8ರಿಂದ ₹10 ಹೆಚ್ಚುವರಿಯಾಗಿ ನೀಡಬೇಕಾಗುತ್ತದೆ. ವಿದ್ಯುತ್ ಸೌಲಭ್ಯವು ಹಕ್ಕೇ ಹೊರತು ಐಷಾರಾಮ ಅಲ್ಲ. ರೈತರು ಹಾಗೂ ಬಡತದನ ರೇಖೆಗಿಂತ ಕೆಳಗಿರುವವರಿಗೆ ಹೆಚ್ಚಿನ ದರ ವಿಧಿಸುವ ನಿರ್ಧಾರ ಸರಿಯಲ್ಲ’ ಎಂದು ಅವರು ಹೇಳಿದ್ದಾರೆ.</p>.<p class="title">*<br />ಮಸೂದೆಯು ರೈತ ವಿರೋಧಿ ಹಾಗೂ ದೇಶೀಯ ಗ್ರಾಹಕ ವಿರೋಧಿಯಾಗಿದ್ದು, ದೇಶದ ಇಡೀ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಇದು ದಾರಿ ಮಾಡಿಕೊಡಲಿದೆ.<br /><em><strong>–ವಿ.ಕೆ. ಗುಪ್ತಾ, ಎಐಪಿಇಎಫ್ ವಕ್ತಾರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೇಂದ್ರ ಸರ್ಕಾರದ ಪ್ರಸ್ತಾವಿತ ವಿದ್ಯುತ್ ತಿದ್ದುಪಡಿ ಮಸೂದೆ–2020 ಹಾಗೂ ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣಕ್ಕೆ ಲಕ್ಷಾಂತರ ಉದ್ಯೋಗಿಗಳು ಹಾಗೂ ಎಂಜಿನಿಯರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರ್ಗಳ ಒಕ್ಕೂಟ (ಎಐಪಿಇಎಫ್) ಹೇಳಿದೆ.</p>.<p class="title">ಕೇಂದ್ರಾಡಳಿತ ಪ್ರದೇಶಗಳ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ತಿಂಗಳು ಪ್ರಕಟಿಸಿದ್ದರು. ವಿದ್ಯುತ್ ತಿದ್ದುಪಡಿ ಮಸೂದೆಯ ಕರಡನ್ನು ಏಪ್ರಿಲ್ 17ರಂದು ಸಚಿವಾಲಯ ಬಿಡುಗಡೆ ಮಾಡಿತ್ತು.</p>.<p class="title">‘ಕೇಂದ್ರ ಸರ್ಕಾರದ ಎರಡು ನಿರ್ಧಾರಗಳನ್ನು ಖಂಡಿಸಿ ವಿದ್ಯುತ್ ವಲಯದ ಲಕ್ಷಾಂತರ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು. ಬಹುತೇಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಸಭೆ ನಡೆಸಲಾಯಿತು. ಈ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು’ ಎಂದು ಒಕ್ಕೂಟದ ವಕ್ತಾರ ವಿ.ಕೆ. ಗುಪ್ತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="title">‘ಮಸೂದೆಯು ಅಂಗೀಕಾರಗೊಂಡ ಬಳಿಕ ರೈತರು ತಿಂಗಳಿಗೆ ₹5,000ದಿಂದ ₹6,000 ವಿದ್ಯುತ್ ದರ ಪಾವತಿಸಬೇಕಾಗುತ್ತದೆ. ತಿಂಗಳಿಗೆ 300 ಯೂನಿಟ್ ವಿದ್ಯುತ್ ಬಳಸುವ ಬಳಕೆದಾರರು ಪ್ರತಿ ಯೂನಿಟ್ಗೆ ₹8ರಿಂದ ₹10 ಹೆಚ್ಚುವರಿಯಾಗಿ ನೀಡಬೇಕಾಗುತ್ತದೆ. ವಿದ್ಯುತ್ ಸೌಲಭ್ಯವು ಹಕ್ಕೇ ಹೊರತು ಐಷಾರಾಮ ಅಲ್ಲ. ರೈತರು ಹಾಗೂ ಬಡತದನ ರೇಖೆಗಿಂತ ಕೆಳಗಿರುವವರಿಗೆ ಹೆಚ್ಚಿನ ದರ ವಿಧಿಸುವ ನಿರ್ಧಾರ ಸರಿಯಲ್ಲ’ ಎಂದು ಅವರು ಹೇಳಿದ್ದಾರೆ.</p>.<p class="title">*<br />ಮಸೂದೆಯು ರೈತ ವಿರೋಧಿ ಹಾಗೂ ದೇಶೀಯ ಗ್ರಾಹಕ ವಿರೋಧಿಯಾಗಿದ್ದು, ದೇಶದ ಇಡೀ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಇದು ದಾರಿ ಮಾಡಿಕೊಡಲಿದೆ.<br /><em><strong>–ವಿ.ಕೆ. ಗುಪ್ತಾ, ಎಐಪಿಇಎಫ್ ವಕ್ತಾರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>