<p><strong>ನವದೆಹಲಿ:</strong> ಕೇಂದ್ರದ ಬಜೆಟ್ನಲ್ಲಿ ತೈಲ ಬೆಲೆ ಏರಿಸುವ ಪ್ರಸ್ತಾಪ ಮಾಡಿರುವುದನ್ನು ವಿರೋಧಿಸಿರುವ ವಿವಿಧ ರಾಜಕೀಯ ಪಕ್ಷಗಳು, ‘ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗುತ್ತದೆ. ಕೂಡಲೇ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದವು.</p>.<p>ಲೋಕಸಭೆಯಲ್ಲಿ ಬಜೆಟ್ ಕುರಿತ ಚರ್ಚೆಗೆ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಸಂದರ್ಭದಲ್ಲಿ ನಮ್ಮಲ್ಲಿ ಮಾತ್ರ ಬೆಲೆ ಏರಿಕೆ ಮಾಡಿರುವುದು ಎಂಥ ಬುದ್ಧಿವಂತಿಕೆ’ ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/business/commerce-news/budget-2019-tax-gold-petrol-649277.html" target="_blank">ಪೆಟ್ರೋಲ್, ಡೀಸೆಲ್ಗೆ ಸೆಸ್ ಹೊರೆ: ಪ್ರತಿ ಲೀಟರಿಗೆ ₹ 3ರವರೆಗೂ ಏರಿಕೆ</a></strong></p>.<p>‘ಕೇಂದ್ರ ಸರ್ಕಾರದ ತೆರಿಗೆ ನೀತಿಯಿಂದಾಗಿ ಭಾರತದ ಜನರು ಜಗತ್ತಿನ ಬೇರೆ ಯಾವ ರಾಷ್ಟ್ರದಲ್ಲೂ ಇಲ್ಲದಷ್ಟು ದರ ಕೊಟ್ಟು ತೈಲವನ್ನು ಖರೀದಿಸುವಂತಾಗಿದೆ’ ಎಂದು ತರೂರ್ ಟೀಕಿಸಿದರು.</p>.<p>‘ತೈಲ ಬೆಲೆ ಏರಿಕೆಯು ಆರ್ಥಿಕವಾಗಿ ಇತರ ಅನೇಕ ಪರಿಣಾಮಗಳನ್ನು ಉಂಟುಮಾಡುತ್ತವೆ. ಅಗತ್ಯ ವಸ್ತುಗಳು ದುಬಾರಿಯಾಗುತ್ತವೆ. ಜನಸಾಮಾನ್ಯರಿಗೆ ಇಂಥ ಶಿಕ್ಷೆಯನ್ನೇಕೆ ಕೊಡಬೇಕು? ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು, ಮಾತ್ರವಲ್ಲ ಡೀಸೆಲ್ ಹಾಗೂ ಪೆಟ್ರೋಲ್ ಅನ್ನು ಜಿಎಸ್ಟಿ ವ್ಯಾಪ್ತಿಯೊಳಗೆ ತರಬೇಕು’ ಎಂದು ಡಿಎಂಕೆಯ ಟಿ.ಆರ್. ಬಾಲು ಒತ್ತಾಯಿಸಿದರು.</p>.<p>ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅವರೂ ತೈಲ ಬೆಲೆ ಏರಿಕೆಯ ಪ್ರಸ್ತಾಪವನ್ನು ಖಂಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/business/commerce-news/petrol-price-hike-649455.html" target="_blank">ತೆರಿಗೆ ಹೆಚ್ಚಳ: ಪೆಟ್ರೋಲ್, ಡೀಸೆಲ್ ದರ ಏರಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರದ ಬಜೆಟ್ನಲ್ಲಿ ತೈಲ ಬೆಲೆ ಏರಿಸುವ ಪ್ರಸ್ತಾಪ ಮಾಡಿರುವುದನ್ನು ವಿರೋಧಿಸಿರುವ ವಿವಿಧ ರಾಜಕೀಯ ಪಕ್ಷಗಳು, ‘ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗುತ್ತದೆ. ಕೂಡಲೇ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದವು.</p>.<p>ಲೋಕಸಭೆಯಲ್ಲಿ ಬಜೆಟ್ ಕುರಿತ ಚರ್ಚೆಗೆ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಸಂದರ್ಭದಲ್ಲಿ ನಮ್ಮಲ್ಲಿ ಮಾತ್ರ ಬೆಲೆ ಏರಿಕೆ ಮಾಡಿರುವುದು ಎಂಥ ಬುದ್ಧಿವಂತಿಕೆ’ ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/business/commerce-news/budget-2019-tax-gold-petrol-649277.html" target="_blank">ಪೆಟ್ರೋಲ್, ಡೀಸೆಲ್ಗೆ ಸೆಸ್ ಹೊರೆ: ಪ್ರತಿ ಲೀಟರಿಗೆ ₹ 3ರವರೆಗೂ ಏರಿಕೆ</a></strong></p>.<p>‘ಕೇಂದ್ರ ಸರ್ಕಾರದ ತೆರಿಗೆ ನೀತಿಯಿಂದಾಗಿ ಭಾರತದ ಜನರು ಜಗತ್ತಿನ ಬೇರೆ ಯಾವ ರಾಷ್ಟ್ರದಲ್ಲೂ ಇಲ್ಲದಷ್ಟು ದರ ಕೊಟ್ಟು ತೈಲವನ್ನು ಖರೀದಿಸುವಂತಾಗಿದೆ’ ಎಂದು ತರೂರ್ ಟೀಕಿಸಿದರು.</p>.<p>‘ತೈಲ ಬೆಲೆ ಏರಿಕೆಯು ಆರ್ಥಿಕವಾಗಿ ಇತರ ಅನೇಕ ಪರಿಣಾಮಗಳನ್ನು ಉಂಟುಮಾಡುತ್ತವೆ. ಅಗತ್ಯ ವಸ್ತುಗಳು ದುಬಾರಿಯಾಗುತ್ತವೆ. ಜನಸಾಮಾನ್ಯರಿಗೆ ಇಂಥ ಶಿಕ್ಷೆಯನ್ನೇಕೆ ಕೊಡಬೇಕು? ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು, ಮಾತ್ರವಲ್ಲ ಡೀಸೆಲ್ ಹಾಗೂ ಪೆಟ್ರೋಲ್ ಅನ್ನು ಜಿಎಸ್ಟಿ ವ್ಯಾಪ್ತಿಯೊಳಗೆ ತರಬೇಕು’ ಎಂದು ಡಿಎಂಕೆಯ ಟಿ.ಆರ್. ಬಾಲು ಒತ್ತಾಯಿಸಿದರು.</p>.<p>ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅವರೂ ತೈಲ ಬೆಲೆ ಏರಿಕೆಯ ಪ್ರಸ್ತಾಪವನ್ನು ಖಂಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/business/commerce-news/petrol-price-hike-649455.html" target="_blank">ತೆರಿಗೆ ಹೆಚ್ಚಳ: ಪೆಟ್ರೋಲ್, ಡೀಸೆಲ್ ದರ ಏರಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>