ಕೇಂದ್ರ ಸರ್ಕಾರದ ಅತ್ಯಂತ ಪ್ರಮುಖ ನೇಮಕಾತಿ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಹತ್ವದ ಸ್ಥಾನವಿದೆ. ಲೋಕಪಾಲ, ಕೇಂದ್ರ ಜಾಗೃತ ಆಯೋಗ, ಸಿಬಿಐ ನಿರ್ದೇಶಕರ ನೇಮಕಾತಿಯಲ್ಲಿ ವಿರೋಧ ಪಕ್ಷದ ನಾಯಕ ಮಹತ್ವದ ಪಾತ್ರವಹಿಸುತ್ತಾರೆ. 2014ರಲ್ಲಿ ಕಾಂಗ್ರೆಸ್ನ ತೀವ್ರ ಆಗ್ರಹದ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಮಿತಿಗಳಲ್ಲಿ ಸ್ಥಾನ ಕಲ್ಪಿಸಲಾಯಿತು. ಆದರೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಿರಲಿಲ್ಲ. ಆದರೆ ಖರ್ಗೆ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನ ಸ್ಥಾನ ನೀಡಲಾಗಿತ್ತು.