ಅಮರಾವತಿ: ವಿಜಯವಾಡದ ಗೋಶಾಲೆಯಲ್ಲಿ ಶುಕ್ರವಾರ ರಾತ್ರಿ 100ಕ್ಕೂ ಹೆಚ್ಚು ಗೋವುಗಳು ಮೃತಪಟ್ಟಿದ್ದು, ಹಲವು ಗಂಭೀರ ಸ್ಥಿತಿಯಲ್ಲಿವೆ. ಇಷ್ಟೊಂದು ಸಂಖ್ಯೆಯಲ್ಲಿ ಗೋವುಗಳು ಸಾಯಲು ಆಹಾರದಲ್ಲಿ ವಿಷ ಬೆರೆತಿರುವ ಶಂಕೆ ವ್ಯಕ್ತವಾಗಿದೆ. ಮೃತ ಗೋವುಗಳ ಮರಣೋತ್ತರ ಪರೀಕ್ಷೆಯ ವರದಿ ನಂತರವೇ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.