<p class="title"><strong>ಮುಂಬೈ:</strong> ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಿವಭೋಜನ ಯೋಜನೆಯ ಲಾಭ ಒಂದು ಕೋಟಿಗೂ ಅಧಿಕಜನರಿಗೆ ದೊರೆತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಹೇಳಿದರು. ಬಡವರಿಗೆ ₹10ರ ದರದಲ್ಲಿ ಊಟ ಒದಗಿಸುವ ಯೋಜನೆಯನ್ನು ಈ ವರ್ಷದ ಜನವರಿಯಲ್ಲಿ ಆರಂಭಿಸಲಾಗಿತ್ತು.</p>.<p class="title">ಕೋವಿಡ್ನಿಂದಾಗಿ ಜಾರಿಗೊಳಿಸಿದ ಲಾಕ್ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ರೂ 5ಕ್ಕೆ ಪ್ಲೇಟ್ ಊಟ ಒದಗಿಸಲಾಗಿತ್ತು. ವಲಸೆ ಕಾರ್ಮಿಕರು, ಕಡುಬಡವರು ಇದರ ಅನುಕೂಲ ಪಡೆದಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p class="title">ರಾಜ್ಯದಲ್ಲಿ ಸುಮಾರು 848 ಶಿವಭೋಜನ ಕೇಂದ್ರಗಳಿವೆ. ತಾಲ್ಲೂಕು ಮಟ್ಟದಲ್ಲಿಯೂ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಇದುವರೆಗೂ ಯೋಜನೆಯಡಿ ಒಟ್ಟು 1,00,00,870 ಫ್ಲೇಟ್ ಊಟವನ್ನು ಪೂರೈಸಲಾಗಿದೆ. ಅಗತ್ಯವುಳ್ಳವರಿಗೆ ಈ ಯೋಜನೆ ವರದಾನವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಿವಭೋಜನ ಯೋಜನೆಯ ಲಾಭ ಒಂದು ಕೋಟಿಗೂ ಅಧಿಕಜನರಿಗೆ ದೊರೆತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಹೇಳಿದರು. ಬಡವರಿಗೆ ₹10ರ ದರದಲ್ಲಿ ಊಟ ಒದಗಿಸುವ ಯೋಜನೆಯನ್ನು ಈ ವರ್ಷದ ಜನವರಿಯಲ್ಲಿ ಆರಂಭಿಸಲಾಗಿತ್ತು.</p>.<p class="title">ಕೋವಿಡ್ನಿಂದಾಗಿ ಜಾರಿಗೊಳಿಸಿದ ಲಾಕ್ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ರೂ 5ಕ್ಕೆ ಪ್ಲೇಟ್ ಊಟ ಒದಗಿಸಲಾಗಿತ್ತು. ವಲಸೆ ಕಾರ್ಮಿಕರು, ಕಡುಬಡವರು ಇದರ ಅನುಕೂಲ ಪಡೆದಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p class="title">ರಾಜ್ಯದಲ್ಲಿ ಸುಮಾರು 848 ಶಿವಭೋಜನ ಕೇಂದ್ರಗಳಿವೆ. ತಾಲ್ಲೂಕು ಮಟ್ಟದಲ್ಲಿಯೂ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಇದುವರೆಗೂ ಯೋಜನೆಯಡಿ ಒಟ್ಟು 1,00,00,870 ಫ್ಲೇಟ್ ಊಟವನ್ನು ಪೂರೈಸಲಾಗಿದೆ. ಅಗತ್ಯವುಳ್ಳವರಿಗೆ ಈ ಯೋಜನೆ ವರದಾನವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>