ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠದ ಮುಂದೆ ಜಾಮೀನು ವಿಚಾರ ಪ್ರಸ್ತಾಪಿಸಿದ್ದು, ಮಂಗಳವಾರ ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿದಾರರು 90 ದಿನಗಳಿಂದ ಜೈಲಿನಲ್ಲಿದ್ದು, ಅವರ ಜಾಮೀನು ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಎಂದೂ ನ್ಯಾಯಪೀಠಕ್ಕೆ ಕಪಿಲ್ ಸಿಬಲ್ ಮಾಹಿತಿ ನೀಡಿದ್ದಾರೆ. ಅರ್ಜಿಯನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.