ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೇನಾ ಠಾಣೆ ಗುರಿಯಾಗಿಸಿ ಪಾಕ್ ದಾಳಿ’

Last Updated 20 ಮಾರ್ಚ್ 2019, 5:02 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯಿರುವ ಭಾರತದ ಸೇನಾ ಠಾಣೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಿರಂತರ ದಾಳಿ ನಡೆಸುತ್ತಿದೆ.

‘ರಜೋರಿಯ ಸುಂದರಬನಿ ವಲಯ ಹಾಗೂ ಜಮ್ಮುವಿನ ಅಕ್ನೂರ್‌ ವಲಯದಲ್ಲಿ ಸೋಮವಾರ ಮಧ್ಯರಾತ್ರಿ ಪಾಕಿಸ್ತಾನದ ಯೋಧರು ಅಪ್ರಚೋದಿತ ದಾಳಿ ನಡೆಸಿದ್ದಾರೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಪ್ಟಿನೆಂಟ್ ಕಲೊನಿಯಲ್‌ ದೇವೇಂದರ್‌ ಆನಂದ್‌ ಆರೋಪಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಅಕ್ನೂರ್‌ ವಲಯದಲ್ಲಿ ಶೆಲ್‌ ಹಾಗೂ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರ ಬಳಸಿ ದಾಳಿ ನಡೆಸಲಾಗಿದೆ. ಭಾರತ ಸಹ ಪ್ರತಿದಾಳಿ ನಡೆಸಿ ಹಿಮ್ಮೆಟ್ಟಿಸಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದಿದ್ದಾರೆ.

ಸುಂದರಬನಿ ವಲಯದಲ್ಲಿ ನಡೆದಿದ್ದ ಗುಂಡಿನ ದಾಳಿಯಲ್ಲಿ ಪಂಜಾಬ್‌ನ ಯೋಧ ಕರಮಜೀತ್ ಸಿಂಗ್‌ ಹುತಾತ್ಮರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT