<p class="title"><strong>ಇಸ್ಲಾಮಾಬಾದ್</strong>: ‘ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ’ ಎಂದು ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ನ್ಯಾಷನಲ್ ಅಸೆಂಬ್ಲಿಯಲ್ಲಿ ಆರೋಪಿಸಿದ್ದಾರೆ.</p>.<p class="title">‘ಮುಂಬೈ ಮಾದರಿಯ ದಾಳಿ ನಡೆಸಲು ಭಾರತ ಪ್ರಯತ್ನಿಸಿತ್ತು. ಅವರು ಅಸ್ಥಿರತೆ ಉಂಟುಮಾಡಲು ಬಯಸುತ್ತಿದ್ದಾರೆ. ಭಾರತವೇ ಈ ದಾಳಿ ನಡೆಸಿದೆ ಎಂಬುದರಲ್ಲಿ ಸಂಶಯವೇ ಇಲ್ಲ’ ಎಂದು ಅವರು ಹೇಳಿದ್ದಾರೆ.</p>.<p class="title">‘ಭಾರಿ ದಾಳಿಗೆ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಆದರೆ, ನಮ್ಮ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿವೆ’ ಎಂದು ಅವರು ಹೇಳಿದ್ದಾರೆ.</p>.<p class="title">ಸೋಮವಾರ ವಿದೇಶಾಂಗ ಸಚಿವ ಖುರೇಶಿ ಅವರು, ದಾಳಿಗೆ ಭಾರತವನ್ನೇ ದೂಷಿಸಿದ್ದರು. ಆದರೆ, ಈ ಆರೋಪವನ್ನು ಭಾರತ ತಳ್ಳಿ ಹಾಕಿತ್ತು.</p>.<p class="title">ದಾಳಿಯ ಹೊಣೆಯನ್ನು ದಿ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ(ಬಿಎಲ್ಎ) ಜೊತೆ ಸಂಪರ್ಕ ಹೊಂದಿರುವ ಮಜೀದ್ ಬ್ರಿಗೇಡ್ ಹೊತ್ತುಕೊಂಡಿದೆ. ಈ ಸಂಘಟನೆಯನ್ನು ಪಾಕಿಸ್ತಾನ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿ ನಿಷೇಧಿಸಲಾಗಿದೆ.</p>.<p>ಇಲ್ಲಿನ ಪಾಕಿಸ್ತಾನ ಷೇರು ವಿನಿಮಯ ಕೇಂದ್ರದ(ಪಿಎಸ್ಎಕ್ಸ್) ಮೇಲೆ ಸೋಮವಾರ ಬೆಳಿಗ್ಗೆ ನಾಲ್ವರು ಶಸ್ತ್ರಸಜ್ಜಿತ ಉಗ್ರರು ಗ್ರೆನೈಡ್, ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ, ಓರ್ವ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ನಾಗರಿಕರು ಸೇರಿ 11 ಜನರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಇಸ್ಲಾಮಾಬಾದ್</strong>: ‘ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ’ ಎಂದು ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ನ್ಯಾಷನಲ್ ಅಸೆಂಬ್ಲಿಯಲ್ಲಿ ಆರೋಪಿಸಿದ್ದಾರೆ.</p>.<p class="title">‘ಮುಂಬೈ ಮಾದರಿಯ ದಾಳಿ ನಡೆಸಲು ಭಾರತ ಪ್ರಯತ್ನಿಸಿತ್ತು. ಅವರು ಅಸ್ಥಿರತೆ ಉಂಟುಮಾಡಲು ಬಯಸುತ್ತಿದ್ದಾರೆ. ಭಾರತವೇ ಈ ದಾಳಿ ನಡೆಸಿದೆ ಎಂಬುದರಲ್ಲಿ ಸಂಶಯವೇ ಇಲ್ಲ’ ಎಂದು ಅವರು ಹೇಳಿದ್ದಾರೆ.</p>.<p class="title">‘ಭಾರಿ ದಾಳಿಗೆ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಆದರೆ, ನಮ್ಮ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿವೆ’ ಎಂದು ಅವರು ಹೇಳಿದ್ದಾರೆ.</p>.<p class="title">ಸೋಮವಾರ ವಿದೇಶಾಂಗ ಸಚಿವ ಖುರೇಶಿ ಅವರು, ದಾಳಿಗೆ ಭಾರತವನ್ನೇ ದೂಷಿಸಿದ್ದರು. ಆದರೆ, ಈ ಆರೋಪವನ್ನು ಭಾರತ ತಳ್ಳಿ ಹಾಕಿತ್ತು.</p>.<p class="title">ದಾಳಿಯ ಹೊಣೆಯನ್ನು ದಿ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ(ಬಿಎಲ್ಎ) ಜೊತೆ ಸಂಪರ್ಕ ಹೊಂದಿರುವ ಮಜೀದ್ ಬ್ರಿಗೇಡ್ ಹೊತ್ತುಕೊಂಡಿದೆ. ಈ ಸಂಘಟನೆಯನ್ನು ಪಾಕಿಸ್ತಾನ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿ ನಿಷೇಧಿಸಲಾಗಿದೆ.</p>.<p>ಇಲ್ಲಿನ ಪಾಕಿಸ್ತಾನ ಷೇರು ವಿನಿಮಯ ಕೇಂದ್ರದ(ಪಿಎಸ್ಎಕ್ಸ್) ಮೇಲೆ ಸೋಮವಾರ ಬೆಳಿಗ್ಗೆ ನಾಲ್ವರು ಶಸ್ತ್ರಸಜ್ಜಿತ ಉಗ್ರರು ಗ್ರೆನೈಡ್, ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ, ಓರ್ವ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ನಾಗರಿಕರು ಸೇರಿ 11 ಜನರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>