ಜಮ್ಮು: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಸೋಮವಾರ ನಡೆಸಿದ ಗುಂಡಿನ ದಾಳಿಯಲ್ಲಿ ಯೋಧ ಹುತಾತ್ಮನಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ರಜೋರಿ ಜಿಲ್ಲೆ ಸುಂದರಬನಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಪಾಕಿಸ್ತಾನದ ಪಡೆಗಳು ಶೆಲ್ ದಾಳಿ ನಡೆಸಿವೆ ಎಂದು ರಕ್ಷಣಾ ಪಡೆಯ ವಕ್ತಾರರು ತಿಳಿಸಿದ್ದಾರೆ.
ಭಾರತದ ಯೋಧರು ಪ್ರತಿ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಕರಮ್ಜೀತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರು ಸಾವನ್ನಪ್ಪಿದ್ದಾರೆ.