ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್ ಸೆಕ್ಟರ್ನಲ್ಲಿ ಭಾನುವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿದ್ದು ಎರಡು ಮನೆಗಳು ಭಾಗಶಃ ಹಾನಿಗೀಡಾಗಿವೆ.
ಗಾಯಗೊಂಡ ವ್ಯಕ್ತಿಯನ್ನು ಗೋಹ್ಲಾದ್ ಗ್ರಾಮದ ಮೊಹಮ್ಮದ್ ಯಾಸೀನ್ ಎಂದು ಗುರುತಿಸಲಾಗಿದೆ ಭಾರತದ ಸೈನಿಕ ನೆಲೆ ಮತ್ತು ಗ್ರಾಮದ ಮೇಲೆ ಭಾನುವಾರ ಮುಂಜಾನೆ 3.10ಕ್ಕೆಪಾಕಿಸ್ತಾನ ಶೆಲ್ ದಾಳಿ ನಡೆಸಿದೆ.ಗ್ರಾಮಗಳನ್ನು ಗುರಿಯಿಟ್ಟು ಅವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸುಮಾರು ನಾಲ್ಕು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ವ್ಯಕ್ತಿಯೊಬ್ಬರ ಕಾಲಿಗೆ ಗಾಯವಾಗಿದೆ, ಎರಡು ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. ಗುಂಡಿನ ದಾಳಿ ಮತ್ತು ಶೆಲ್ ಆಕ್ರಮಣ ಮಾಡುವ ಮೂಲಕ ಪಾಕ್ ಪಡೆ ಶನಿವಾರವೂ ಕದನ ವಿರಾಮ ಉಲ್ಲಂಘಿಸಿತ್ತು.