ಪಕ್ಷದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ಜನರು ಸಂತೋಷವಾಗಿಲ್ಲ, ಅವರ ದೇಶದಲ್ಲೇ ಅವರಿಗೆ ಅನ್ಯಾಯವಾಗುತ್ತಿದೆ ಎಂದೆಲ್ಲ ಇಲ್ಲಿ ಪ್ರಚಾರ ಮಾಡಲಾಗುತ್ತಿದೆ. ಪಾಕಿಸ್ತಾನದ ವಾಸ್ತವ ಸ್ಥಿತಿಅರಿಯದವರು ಮಾಡುವ ಇಂಥ ಟೀಕೆಗಳ ಹಿಂದೆ ರಾಜಕೀಯ ಲಾಭ ಪಡೆಯುವ ಉದ್ದೇಶವಿರುತ್ತದೆ. ಬಿಜೆಪಿಯವರು ಪಾಕ್ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ’ ಎಂದರು.