<p><strong>ಮುಂಬೈ:</strong>ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆಯ ತನಿಖೆ ಮಂದಗತಿಯಲ್ಲಿ ಸಾಗುತ್ತಿರುವ ಕುರಿತುಬಾಂಬೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.</p>.<p>ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ನ್ಯಾಯಾಲಯಕ್ಕೆತನಿಖಾ ಪ್ರಗತಿಯ ವರದಿ ಸಲ್ಲಿಸಿತು.</p>.<p>‘ನಾಪತ್ತೆಯಾಗಿರುವ ಇಬ್ಬರು ಆರೋಪಿಗಳಲ್ಲಿ ಒಬ್ಬ ರಾಜ್ಯದಲ್ಲಿ ಸ್ಥಿರಾಸ್ತಿ ಹೊಂದಿದ್ದಾನೆ. ಆದ್ದರಿಂದ ಆತ ಎಲ್ಲಿದ್ದಾನೆ ಎನ್ನುವ ಮಾಹಿತಿ ಸಂಗ್ರಹಿಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ವರದಿ ಓದಿದ ನ್ಯಾಯಪೀಠ, ‘ಆರೋಪಿಗಳ ಪತ್ತೆಗೆ ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ವಿಧಾನ ಅನುಸರಿಸುತ್ತಿರುವುದರಿಂದ ಅಪಹಾಸ್ಯಕ್ಕೆ ಗುರಿಯಾಗಿದೆ’ ಎಂದು ಹೇಳಿದೆ.</p>.<p>ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಕಾರಣ ತಿಳಿಸಬೇಕೆಂದು ಬಾಂಬೆ ಹೈಕೋರ್ಟ್ನ ಎಸ್.ಸಿ. ಧರ್ಮಾಧಿಕಾರಿ ಹಾಗೂ ಬಿ.ಪಿ. ಕೊಲಾಬವಲ್ಲಾ ಅವರಿದ್ದ ಪೀಠ, ಮಹಾರಾಷ್ಟ್ರ ಗೃಹಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ. ಇದೇ 28ರಂದು ನ್ಯಾಯಾಲಯಕ್ಕೆ ವಿವರಣೆ ನೀಡುವಂತೆ ಸಮನ್ಸ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ನ್ಯಾಯಾಲಯ ಮಧ್ಯಪ್ರವೇಶಿಸಿದ ಬಳಿಕ ಅಪರಾಧ ಪ್ರಕರಣಗಳ ತನಿಖೆ ನಡೆಯುವುದಾದರೆ, ಪ್ರತಿ ಬಾರಿಯೂ ಸಂಕಷ್ಟದಿಂದ ಪಾರು ಮಾಡಲು ನ್ಯಾಯಾಲಯ ಮಧ್ಯಪ್ರವೇಶಿಸಬೇಕೆಂದರೆ... ಅದು ದುರಂತ. ಸಮಾಜಕ್ಕೆ ಎಂತಹ ಸಂದೇಶ ನೀಡಿದಂತಾಗುತ್ತದೆ’ ಎಂದು ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆಯ ತನಿಖೆ ಮಂದಗತಿಯಲ್ಲಿ ಸಾಗುತ್ತಿರುವ ಕುರಿತುಬಾಂಬೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.</p>.<p>ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ನ್ಯಾಯಾಲಯಕ್ಕೆತನಿಖಾ ಪ್ರಗತಿಯ ವರದಿ ಸಲ್ಲಿಸಿತು.</p>.<p>‘ನಾಪತ್ತೆಯಾಗಿರುವ ಇಬ್ಬರು ಆರೋಪಿಗಳಲ್ಲಿ ಒಬ್ಬ ರಾಜ್ಯದಲ್ಲಿ ಸ್ಥಿರಾಸ್ತಿ ಹೊಂದಿದ್ದಾನೆ. ಆದ್ದರಿಂದ ಆತ ಎಲ್ಲಿದ್ದಾನೆ ಎನ್ನುವ ಮಾಹಿತಿ ಸಂಗ್ರಹಿಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ವರದಿ ಓದಿದ ನ್ಯಾಯಪೀಠ, ‘ಆರೋಪಿಗಳ ಪತ್ತೆಗೆ ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ವಿಧಾನ ಅನುಸರಿಸುತ್ತಿರುವುದರಿಂದ ಅಪಹಾಸ್ಯಕ್ಕೆ ಗುರಿಯಾಗಿದೆ’ ಎಂದು ಹೇಳಿದೆ.</p>.<p>ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಕಾರಣ ತಿಳಿಸಬೇಕೆಂದು ಬಾಂಬೆ ಹೈಕೋರ್ಟ್ನ ಎಸ್.ಸಿ. ಧರ್ಮಾಧಿಕಾರಿ ಹಾಗೂ ಬಿ.ಪಿ. ಕೊಲಾಬವಲ್ಲಾ ಅವರಿದ್ದ ಪೀಠ, ಮಹಾರಾಷ್ಟ್ರ ಗೃಹಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ. ಇದೇ 28ರಂದು ನ್ಯಾಯಾಲಯಕ್ಕೆ ವಿವರಣೆ ನೀಡುವಂತೆ ಸಮನ್ಸ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ನ್ಯಾಯಾಲಯ ಮಧ್ಯಪ್ರವೇಶಿಸಿದ ಬಳಿಕ ಅಪರಾಧ ಪ್ರಕರಣಗಳ ತನಿಖೆ ನಡೆಯುವುದಾದರೆ, ಪ್ರತಿ ಬಾರಿಯೂ ಸಂಕಷ್ಟದಿಂದ ಪಾರು ಮಾಡಲು ನ್ಯಾಯಾಲಯ ಮಧ್ಯಪ್ರವೇಶಿಸಬೇಕೆಂದರೆ... ಅದು ದುರಂತ. ಸಮಾಜಕ್ಕೆ ಎಂತಹ ಸಂದೇಶ ನೀಡಿದಂತಾಗುತ್ತದೆ’ ಎಂದು ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>