ಕಾಂಗ್ರೆಸ್ ಸಂಸದ ಆನಂದ ಶರ್ಮಾ ಅಧ್ಯಕ್ಷತೆಯ ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು, ದೆಹಲಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳ ಕುರಿತು ಚರ್ಚಿಸಲು ಸೋಮವಾರ ಕರೆದ ಸಭೆಯಲ್ಲಿ ಗೃಹ ಇಲಾಖೆಯ ಉನ್ನತ ಅಧಿಕಾರಿಗಳು, ದೆಹಲಿ ಪೊಲೀಸ್ ಕಮಿಷನರ್ ಅಮೂಲ್ಯ ಪಟ್ನಾಯಕ್, ಹರಿಯಾಣ ಡಿಜಿಪಿ ಮನೋಜ್ ಯಾದವ್, ಉತ್ತರ ಪ್ರದೇಶ, ರಾಜಸ್ಥಾನದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.