‘ಕ್ರಮಬದ್ಧವಾಗಿ ವ್ಯವಹಾರ ನಡೆಸುವ ಸಂಸ್ಥೆಗಳಿಗೆ ಈ ಕಾನೂನಿನಿಂದ ಯಾವುದೇ ತೊಂದರೆ ಆಗುವುದಿಲ್ಲ. ಮಾತ್ರವಲ್ಲದೆ ಸ್ನೇಹಿತರು ಮತ್ತು ಸಂಬಂಧಿಗಳಿಂದ ಹಣ ಪಡೆಯುವುದಕ್ಕೆ ಕಾನೂನು ಅಡ್ಡಿಯಾಗುವುದಿಲ್ಲ. ಆದರೆ ಜಾಹೀರಾತುಗಳ ಮೂಲಕ ಜನರನ್ನು ಆಕರ್ಷಿಸಿ, ಅನಿಯಂತ್ರಿತವಾದ ಯೋಜನೆ ಮೂಲಕ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸುವುದನ್ನು ನಿಷೇಧಿಸಲಾಗುತ್ತದೆ’ ಎಂದು ಹಣಕಾಸು ಖಾತೆಯ ರಾಜ್ಯಸಚಿವ ಅನುರಾಗ್ ಠಾಕೂರ್ ಹೇಳಿದರು.