‘ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಪ್ರಕರಣಗಳ ತನಿಖೆಯ ಅಧಿಕಾರವನ್ನು ಎನ್ಐಎಗೆ ನೀಡುವುದರಿಂದ ರಾಜ್ಯ ಸರ್ಕಾರಗಳ ಹಕ್ಕುಗಳಿಗೆ ಧಕ್ಕೆಯಾಗುತ್ತದೆ. ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಅಲ್ಲದೆ ಇದರಿಂದಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಉಂಟಾಗುತ್ತದೆ’ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ವಿವೇಕ್ ತಂಖಾ ಆಕ್ಷೇಪ ವ್ಯಕ್ತಪಡಿಸಿದರು.