‘ಭಾರತವು ಈಗ ಪ್ರತಿವರ್ಷ ₹ 2.7 ಲಕ್ಷ ಕೋಟಿ ಮೌಲ್ಯದಷ್ಟು ಕಲ್ಲಿದ್ದಲ್ಲನ್ನು ಆಮದು ಮಾಡಿಕೊಳ್ಳುತ್ತಿದೆ. ಆದರೆ,ಜಗತ್ತಿನ ಎಲ್ಲಾ ರಾಷ್ಟ್ರಕ್ಕಿಂತ ಅತ್ಯಂತ ಹೆಚ್ಚು ಕಲ್ಲಿದ್ದಲು ನಿಕ್ಷೇಪವನ್ನು ಭಾರತ ಹೊಂದಿದೆ. ಇದನ್ನು ಬಳಸಿಕೊಳ್ಳದೇ ಹೋದರೆ, ಆ ನಿಕ್ಷೇಪವೆಲ್ಲವೂ ವ್ಯರ್ಥವಾಗಿ ಹೋಗುತ್ತದೆ. ಈಗ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆಮದು ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಬಹುದು. ಜತೆಗೆ ವಿದ್ಯುತ್ ಉತ್ಪಾದನೆಗೆ ಡೀಸೆಲ್ ಬಳಕೆಯನ್ನೂ ತಗ್ಗಿಸಬಹುದು’ ಎಂದು ಅವರು ವಿವರಿಸಿದರು.