<p><strong>ನವದೆಹಲಿ (ಪಿಟಿಐ): </strong>ಸಂಸತ್ತಿನ ಉಭಯ ಸದನಗಳ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.</p>.<p>ಸೋಮವಾರ ಯಾವುದೇ ಚರ್ಚೆ ಇಲ್ಲದೆಯೇ ಹಣಕಾಸು ಮಸೂದೆಗೆ ಲೋಕಸಭೆ ಅನುಮೋದನೆ ನೀಡಿದ ಬಳಿಕ ಅಧಿವೇಶನವನ್ನು ಮುಂದೂಡಲಾಯಿತು.</p>.<p>ಈ ಮೊದಲು ಏಪ್ರಿಲ್ 3ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್–19ರಿಂದಾಗಿ ಅಧಿವೇಶನಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು. ಕೊರೊನಾ ವೈರಸ್ ಭೀತಿಯಿಂದಾಗಿ ಟಿಎಂಸಿ, ಶಿವಸೇನಾ, ತೃಣಮೂಲ ಕಾಂಗ್ರೆಸ್ ಹಾಗೂ ಎನ್ಸಿಪಿ ಸೇರಿದಂತೆ ಹಲವು ಪಕ್ಷಗಳು ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದವು.</p>.<p>ವ್ಯಾಪಕವಾಗಿ ಹಬ್ಬುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಾಗೂ ಇದರಿಂದ ಸೃಷ್ಟಿಯಾಗಿರುವ ಸವಾಲುಗಳನ್ನು ಎದುರಿಸಲು ವಿಶೇಷ ಪ್ಯಾಕೆಜ್ ಘೋಷಿಸಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಲ್ಲಿ ಒತ್ತಾಯಿಸಿದರು.</p>.<p>ರಾಜ್ಯಸಭೆಯಲ್ಲೂ ಸೋಮವಾರದ ಕಲಾಪಗಳು ಮುಕ್ತಾಯಗೊಂಡ ಬಳಿಕ ಅಧಿವೇಶನವನ್ನು ಮುಂದೂಡಲಾಯಿತು.</p>.<p>ರಜೆ ಕೋರಿದ ಮನಮೋಹನ್ ಸಿಂಗ್: ಇದಕ್ಕೂ ಮುನ್ನ, ಅನಾರೋಗ್ಯದ ಕಾರಣ ಮಾರ್ಚ್ 19ರಿಂದ ಪ್ರಸ್ತುತ ಅಧಿವೇಶನದ ಉಳಿದ ಅವಧಿಯವರೆಗೆ ರಜೆ ನೀಡುವಂತೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಮನಮೋಹನ್ ಸಿಂಗ್ ಕೋರಿಕೆಗೆ ಸದನ ಅನುಮೋದನೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಸಂಸತ್ತಿನ ಉಭಯ ಸದನಗಳ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.</p>.<p>ಸೋಮವಾರ ಯಾವುದೇ ಚರ್ಚೆ ಇಲ್ಲದೆಯೇ ಹಣಕಾಸು ಮಸೂದೆಗೆ ಲೋಕಸಭೆ ಅನುಮೋದನೆ ನೀಡಿದ ಬಳಿಕ ಅಧಿವೇಶನವನ್ನು ಮುಂದೂಡಲಾಯಿತು.</p>.<p>ಈ ಮೊದಲು ಏಪ್ರಿಲ್ 3ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್–19ರಿಂದಾಗಿ ಅಧಿವೇಶನಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು. ಕೊರೊನಾ ವೈರಸ್ ಭೀತಿಯಿಂದಾಗಿ ಟಿಎಂಸಿ, ಶಿವಸೇನಾ, ತೃಣಮೂಲ ಕಾಂಗ್ರೆಸ್ ಹಾಗೂ ಎನ್ಸಿಪಿ ಸೇರಿದಂತೆ ಹಲವು ಪಕ್ಷಗಳು ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದವು.</p>.<p>ವ್ಯಾಪಕವಾಗಿ ಹಬ್ಬುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಾಗೂ ಇದರಿಂದ ಸೃಷ್ಟಿಯಾಗಿರುವ ಸವಾಲುಗಳನ್ನು ಎದುರಿಸಲು ವಿಶೇಷ ಪ್ಯಾಕೆಜ್ ಘೋಷಿಸಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಲ್ಲಿ ಒತ್ತಾಯಿಸಿದರು.</p>.<p>ರಾಜ್ಯಸಭೆಯಲ್ಲೂ ಸೋಮವಾರದ ಕಲಾಪಗಳು ಮುಕ್ತಾಯಗೊಂಡ ಬಳಿಕ ಅಧಿವೇಶನವನ್ನು ಮುಂದೂಡಲಾಯಿತು.</p>.<p>ರಜೆ ಕೋರಿದ ಮನಮೋಹನ್ ಸಿಂಗ್: ಇದಕ್ಕೂ ಮುನ್ನ, ಅನಾರೋಗ್ಯದ ಕಾರಣ ಮಾರ್ಚ್ 19ರಿಂದ ಪ್ರಸ್ತುತ ಅಧಿವೇಶನದ ಉಳಿದ ಅವಧಿಯವರೆಗೆ ರಜೆ ನೀಡುವಂತೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಮನಮೋಹನ್ ಸಿಂಗ್ ಕೋರಿಕೆಗೆ ಸದನ ಅನುಮೋದನೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>