ಈ ವಿಚಾರವಾಗಿ ಕೇಂದ್ರ ಸರ್ಕಾರದ ಪರ ಸ್ಪಷ್ಟನೆ ನೀಡಿದ ಬಿಜೆಪಿ ನಾಯಕ ಜೆ.ಪಿ.ನಡ್ಡಾ, ‘ಮನಮೋಹನ್ ಸಿಂಗ್ ಮತ್ತು ಗಾಂಧಿ ಕುಟುಂಬದವರಿಗೆ ನೀಡಲಾಗಿದ್ದ ಎಸ್ಪಿಜಿ ಭದ್ರತೆಯನ್ನು ಹಿಂಪಡೆದಿರುವುದು ರಾಜಕೀಯ ನಿರ್ಧಾರ ಅಲ್ಲ. ಗಣ್ಯ ವ್ಯಕ್ತಿಗಳಿಗೆ ಇರುವ ಬೆದರಿಕೆ ಆಧಾರದಲ್ಲಿ ಭದ್ರತೆ ಒದಗಿಸುವುದು ಮತ್ತು ಹಿಂಪಡೆಯಲಾಗುತ್ತದೆ. ಈ ನಿರ್ಧಾರವನ್ನು ರಾಜಕಾರಣಿಗಳು ತೆಗೆದುಕೊಳ್ಳುವುದಿಲ್ಲ. ಗೃಹ ಇಲಾಖೆ ತೀರ್ಮಾನ ಕೈಗೊಳ್ಳುತ್ತದೆ’ ಎಂದು ಹೇಳಿದರು.