ಬಾಗಿಲು ತೆಗೆಯಲು ಯತ್ನಿಸಿದ ಪ್ರಯಾಣಿಕ ರಾಜಸ್ತಾನದ ಅಜ್ಮೀರ್ನಲ್ಲಿ ಪ್ರಮುಖ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದಾರೆ. ಇವರನ್ನು ಹಿಡಿದುಕೊಂಡ ವಿಮಾನದ ಸಿಬ್ಬಂದಿ ಪಟ್ನಾದ ಜಯಪ್ರಕಾಶ್ ನಾರಾಯಣ್ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆ ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ವಶಕ್ಕೆ ನೀಡಿದ್ದರು. ವೈಯಕ್ತಿಕ ಬಾಂಡ್ ಆಧಾರದ ಮೇಲೆ ಅವರನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ.