ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಬೆಂಬಲ ಸೂಚಿಸಿ, ಮಹಾರಾಷ್ಟ್ರ, ದೆಹಲಿ, ಹೈದರಾಬಾದ್ನ ಏಮ್ಸ್ ಆಸ್ಪತ್ರೆ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ಚಿಕಿತ್ಸೆ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ.
Delhi: Patients face difficulties as Resident Doctors Association (RDA) of AIIMS is on strike today over violence against doctors in West Bengal. Relative of a patient says, "My mother's dialysis was scheduled for today, we were told to go & get it done from somewhere else," pic.twitter.com/sFVF6D8VMj
— ANI (@ANI) June 14, 2019
ಭದ್ರತೆಗೆ ಸಂಬಂಧಿಸಿದ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸಲಾಗುವುದು ಎಂದು ಕಿರಿಯ ವೈದ್ಯರು ಪಟ್ಟು ಹಿಡಿದು ಮುಷ್ಕರವನ್ನು ಮುಂದುವರೆಸಿದ್ದಾರೆ. ಈ ವೈದ್ಯರಿಗೆ ಬೆಂಬಲ ಸೂಚಿಸಿ ದೆಹಲಿ, ಹೈದರಾಬಾದಿನ ಏಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಕಿರಿಯ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ರೋಗಿಗಳು ಚಿಕಿತ್ಸೆ ಇಲ್ಲದೆ ಪರದಾಡುತ್ತಿದ್ದಾರೆ.
Hyderabad: Doctors at Nizam's Institute of Medical Sciences hold protest march over violence against doctors at West Bengal's NRS Medical College & Hospital. pic.twitter.com/Y3BsYjxTZ8
— ANI (@ANI) June 14, 2019
ಕೋಲ್ಕತ್ತದ ಎನ್ಆರ್ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವಿಗೀಡಾದ ರೋಗಿಯೊಬ್ಬರ ಸಂಬಂಧಿಕರು ನಡೆಸಿದ ಹಲ್ಲೆ ಯಲ್ಲಿಇಬ್ಬರು ವೈದ್ಯರು ತೀವ್ರ ಗಾಯಗೊಂಡಿದ್ದರು. ಈ ಘಟನೆ ಬಳಿಕ, ಮಂಗಳವಾರದಿಂದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.
Kolkata: Students of NRS Medical College & Hospital sit on a protest over violence against doctors. #WestBengal pic.twitter.com/LgPYkFYsKv
— ANI (@ANI) June 14, 2019
ಮಹಾರಾಷ್ಟ್ರದಲ್ಲಿ ಮುಷ್ಕರ:ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ಮುಷ್ಕರವನ್ನು ಬೆಂಬಲಿಸಿ ಮಹಾರಾಷ್ಟ್ರದಲ್ಲೂ ಕಿರಿಯ ವೈದ್ಯರು ಮುಷ್ಕರ ಆರಂಭಿಸಿದ್ದಾರೆ. ಒಪಿಡಿಯನ್ನು ಬಂದ್ ಮಾಡುವ ಮೂಲಕ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆ ಇಲ್ಲದೇ ಪರದಾಡುವಂತಾಗಿದೆ.
ಎಲ್ಲ ಮುಖ್ಯಮಂತ್ರಿಗಳ ಜತೆ ಚರ್ಚೆ:ವೈದ್ಯರಿಗೆ ಭದ್ರತೆ ಒದಗಿಸುವ ಸಂಬಂಧಿಸಿದ ವಿಷಯವನ್ನು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ವೈದ್ಯರಿಗೆ ಸುರಕ್ಷಿತವಾದ ವಾತಾವರಣ ಕಲ್ಪಿಸುವುದು ಅಗತ್ಯ. ವೈದ್ಯರು ಸಮಾಜದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.