ಮುಂಬೈ: ಕಿರಿಯ ಸಹೋದ್ಯೋಗಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಣೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮೂವರು ವೈದ್ಯರನ್ನು ಜೂನ್ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ 26 ವರ್ಷದ ಕಿರಿಯ ಸಹೋದ್ಯೋಗಿ ಪಾಯಲ್ ತಡ್ವಿ ಈಚೆಗೆ ವಸತಿನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳಿಕ ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪಾಯಲ್ ಅವರಿಗೆ ಜಾತಿ ನಿಂದನೆ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ಭಕ್ತಿ ಮೆಹೆರೆ, ಹೇಮಾ ಆಹುಜಾ ಮತ್ತು ಅಂಕಿತಾ ಖಂಡೇಲ್ವಾಲ್ ಅವರನ್ನು ಬಂಧಿಸಲಾಗಿತ್ತು.