ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.2ರವರೆಗೆ ಪಿ.ಚಿದಂಬರಂ ಬಂಧನ ಅವಧಿ ವಿಸ್ತರಿಸಿ ನ್ಯಾಯಾಲಯ ಆದೇಶ

ಐಎನ್ ಎಕ್ಸ್ ಮೀಡಿಯಾ ಹಗರಣ
Last Updated 30 ಆಗಸ್ಟ್ 2019, 12:53 IST
ಅಕ್ಷರ ಗಾತ್ರ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಸಿಬಿಐ ವಶದಲ್ಲಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಅವಧಿಯನ್ನು ಸೆ.2ರವರೆಗೆ ವಿಸ್ತರಿಸಿ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಸಿಬಿಐನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯಕುಮಾರ್ ಕುಹರ್ ಈ ಆದೇಶ ಹೊರಡಿಸಿದ್ದಾರೆ. ಆ.26ರಂದು ಆದೇಶ ನೀಡಿ ಸಿಬಿಐ ಆ.30ರವರೆಗೆ ವಿಚಾರಣೆ ನಡೆಸಿ ಹಾಜರುಪಡಿಸುವಂತೆ ನ್ಯಾಯಾಲಯ ತಿಳಿಸಿತ್ತು.ಶುಕ್ರವಾರ ನ್ಯಾಯಾಲಯದ ಗಡುವು ಮುಗಿದ ಕಾರಣ ಹಾಜರುಪಡಿಸಲಾಗಿತ್ತು. ಚಿದಂಬರಂ ಅವರು ಎಲ್ಲಾ ಪ್ರಶ್ನೆಗಳಿಗೂ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಇನ್ನೂ ಹೆಚ್ಚಿನ ವಿವರ ಪಡೆಯಬೇಕಾಗಿರುವುದರಿಂದ ಆರೋಪಿಯನ್ನು ವಶಕ್ಕೆ ನೀಡುವಂತೆ ಸಿಬಿಐ ಕೋರಿತ್ತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯ ಸೆ.2ರವರೆಗೆ ವಶಕ್ಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT