ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮರಸ್ಯ ಕಾಪಾಡಿ: ಬಿಜೆಪಿ ಸಂಸದರಿಗೆ ಪ್ರಧಾನಿ ಸೂಚನೆ

Last Updated 3 ಮಾರ್ಚ್ 2020, 19:20 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಅಭಿವೃದ್ಧಿಗೆ ಶಾಂತಿ, ಸೌಹಾರ್ದತೆ ಹಾಗೂ ಒಗ್ಗಟ್ಟು ಅವಶ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಬಿಜೆಪಿ ಸಂಸದರು ಮುಂದಾಗಬೇಕು ಎಂದು ಸೂಚಿಸಿದ್ದಾರೆ.

ದೆಹಲಿ ಗಲಭೆ ಬಳಿಕ ಇದೇ ಮೊದಲು ಬಿಜೆಪಿ ಸಂಸದೀಯ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಈಚೆಗೆ ಸಿಂಗ್ ಅವರು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕುರಿತು ನೀಡಿದ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಮೋದಿ, ‘ಕೆಲವರು ಈ ಘೋಷಣೆಯಲ್ಲಿ ತಪ್ಪು ಹುಡುಕುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಸಿಂಗ್, ‘ಭಾರತ್ ಮಾತಾ ಕಿ ಜೈ ಘೋಷಣೆಯನ್ನು ಗಲಭೆ ಹಾಗೂ ಭಾವನಾತ್ಮಕ ಸನ್ನಿವೇಶಗಳನ್ನು ಸೃಷ್ಟಿಸಲು ದುರ್ಬಳಕೆ ಮಾಡಲಾಗುತ್ತಿದೆ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT