<p class="title"><strong>ನವದೆಹಲಿ:</strong> ಮೂರು ತಿಂಗಳ ವೇತನ ಬಿಡುಗಡೆ ಕುರಿತು ದೆಹಲಿಯ ಎರಡು ಮುನಿಸಿಪಲ್ ಆಸ್ಪತ್ರೆಗಳ ಸ್ಥಾನಿಕ ವೈದ್ಯರ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿರುವ ವೈದ್ಯರ ಸಂಘವು, ವಾರದಲ್ಲಿ ಈ ಬೇಡಿಕೆ ಈಡೇರದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಬೆದರಿಕೆಯೊಡ್ಡಿದೆ.</p>.<p>ಮುನಿಸಿಪಲ್ ವೈದ್ಯರ ಸಂಘವು (ಎಂಸಿಡಿಎ) ಈ ಬಗ್ಗೆ ದೆಹಲಿಯ ಲೆಫ್ಟಿನಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.</p>.<p>ಮನವಿಯ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕಳುಹಿಸಿದೆ.</p>.<p>ದೆಹಲಿಯ ಕಸ್ತೂರಬಾ ಆಸ್ಪತ್ರೆ ಮತ್ತು ಹಿಂದೂರಾವ್ ಆಸ್ಪತ್ರೆಗಳ ಸ್ಥಾನಿಕ ವೈದ್ಯರು ತಮಗೆ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಎರಡೂ ಆಸ್ಪತ್ರೆಗಳಲ್ಲಿ ಹಲವು ವೈದ್ಯರು ಮತ್ತು ಸಿಬ್ಬಂದಿಗೂ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ.</p>.<p>ಎಂಸಿಡಿಎ ಅಧ್ಯಕ್ಷ ಆರ್.ಆರ್.ಗೌತಮ್ ಅವರು, ‘ವೈದ್ಯರು ತಮ್ಮ ಮತ್ತು ಕುಟುಂಬದ ಜೀವ ಪಣಕ್ಕಿಟ್ಟು ನಿತ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವ ವೈದ್ಯರ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ವೈದ್ಯರ ಬೇಡಿಕೆಗೆ ನಮ್ಮ ಸಂಘದ ಬೆಂಬಲವಿದೆ. ವಾರದಲ್ಲಿ ಬೇಡಿಕೆ ಈಡೇರದಿದ್ದರೆ ಕಠಿಣ ನಿಲುವು ಕೈಗೊಳ್ಳಬೇಕಾಗುತ್ತದೆ. ಅಥವಾ ಸಾಮೂಹಿಕವಾಗಿ ವಿಆರ್ಎಸ್ ತೆಗೆದುಕೊಳ್ಳಲು ನಮಗೆ ಅನುಮತಿ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಮೂರು ತಿಂಗಳ ವೇತನ ಬಿಡುಗಡೆ ಕುರಿತು ದೆಹಲಿಯ ಎರಡು ಮುನಿಸಿಪಲ್ ಆಸ್ಪತ್ರೆಗಳ ಸ್ಥಾನಿಕ ವೈದ್ಯರ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿರುವ ವೈದ್ಯರ ಸಂಘವು, ವಾರದಲ್ಲಿ ಈ ಬೇಡಿಕೆ ಈಡೇರದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಬೆದರಿಕೆಯೊಡ್ಡಿದೆ.</p>.<p>ಮುನಿಸಿಪಲ್ ವೈದ್ಯರ ಸಂಘವು (ಎಂಸಿಡಿಎ) ಈ ಬಗ್ಗೆ ದೆಹಲಿಯ ಲೆಫ್ಟಿನಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.</p>.<p>ಮನವಿಯ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕಳುಹಿಸಿದೆ.</p>.<p>ದೆಹಲಿಯ ಕಸ್ತೂರಬಾ ಆಸ್ಪತ್ರೆ ಮತ್ತು ಹಿಂದೂರಾವ್ ಆಸ್ಪತ್ರೆಗಳ ಸ್ಥಾನಿಕ ವೈದ್ಯರು ತಮಗೆ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಎರಡೂ ಆಸ್ಪತ್ರೆಗಳಲ್ಲಿ ಹಲವು ವೈದ್ಯರು ಮತ್ತು ಸಿಬ್ಬಂದಿಗೂ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ.</p>.<p>ಎಂಸಿಡಿಎ ಅಧ್ಯಕ್ಷ ಆರ್.ಆರ್.ಗೌತಮ್ ಅವರು, ‘ವೈದ್ಯರು ತಮ್ಮ ಮತ್ತು ಕುಟುಂಬದ ಜೀವ ಪಣಕ್ಕಿಟ್ಟು ನಿತ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವ ವೈದ್ಯರ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ವೈದ್ಯರ ಬೇಡಿಕೆಗೆ ನಮ್ಮ ಸಂಘದ ಬೆಂಬಲವಿದೆ. ವಾರದಲ್ಲಿ ಬೇಡಿಕೆ ಈಡೇರದಿದ್ದರೆ ಕಠಿಣ ನಿಲುವು ಕೈಗೊಳ್ಳಬೇಕಾಗುತ್ತದೆ. ಅಥವಾ ಸಾಮೂಹಿಕವಾಗಿ ವಿಆರ್ಎಸ್ ತೆಗೆದುಕೊಳ್ಳಲು ನಮಗೆ ಅನುಮತಿ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>