<p><strong>ನವದೆಹಲಿ(ಪಿಟಿಐ):</strong> ಮಾರಕವಾದ ಕೊರೊನಾ ವೈರಾಣುಸೋಂಕುಸಮುದಾಯದಲ್ಲಿ ವ್ಯಾಪಕವಾಗಿ ಹರಡಬಹುದು ಎಂಬುದಕ್ಕೆ, ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.</p>.<p>ಈ ಮೂಲಕಸೋಂಕುಹರಡುವ ವೇಗ ದೇಶದಲ್ಲಿ ಮೂರನೇ ಹಂತಕ್ಕೆ ಪ್ರವೇಶಿಸಿದೆ ಎಂದು ಹಬ್ಬಿದ್ದ ವದಂತಿಗೆ ತೆರೆ ಎಳೆದಿದ್ದು, ಇಂಥ ವದಂತಿಯಿಂದ ದುಗುಡಕ್ಕೆ ಒಳಗಾಗಿದ್ದ ಜನರಿಗೂ ಸ್ವಲ್ಪ ಮಟ್ಟಿಗಿನ ನೆಮ್ಮದಿಯನ್ನು ನೀಡಿದೆ. ಈ ಮಧ್ಯೆ,ಸೋಂಕುಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.</p>.<p>ಸೋಂಕುಹರಡುವುದನ್ನು ತಡೆಯುವ ಕ್ರಮವಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ನಿರ್ಬಂಧ ಮತ್ತು ಪೊಲೀಸರ ಕಟ್ಟೆಚ್ಚರದ ನಡುವೆಯೂ ಜನರು ಇವುಗಳನ್ನು ಉಲ್ಲಂಘಿಸಿ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಬೆಳವಣಿಗೆಯು ಆತಂಕವನ್ನು ಹೆಚ್ಚಿಸುತ್ತಿದೆ.</p>.<p>ಸೋಂಕುಏರಿಕೆ ಪ್ರಮಾಣ ಸ್ಥಿರವಾಗಿದೆ. ಹೀಗಾಗಿ,ಸೋಂಕುಸಮುದಾಯದಲ್ಲಿ ಸಾಂಕ್ರಾಮಿಕ ಆಗಬಹುದು ಎಂಬುದಕ್ಕೆ ಯಾವುದೇ ನಿದರ್ಶನವಿಲ್ಲ. ಹಾಗೆಂದೂ, ಈಗ ಜಾರಿಯಲ್ಲಿರುವ ನಿರ್ಬಂಧಗಳನ್ನು ಈ ಹಂತದಲ್ಲಿ ಸಡಿಲಿಸುವ ಸ್ಥಿತಿಯೂ ಇಲ್ಲ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.</p>.<p>ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು, `ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಒಟ್ಟಾರೆಯಾಗಿ ಪರಿಸ್ಥಿತಿ ಸ್ಥಿರವಾಗಿದೆ. ಯಾವ ಪ್ರಮಾಣದಲ್ಲಿಸೋಂಕುಏರಿಕೆ ಆಗಬೇಕಿತ್ತೋ ಆ ಪ್ರಮಾಣದಲ್ಲಿ ಏರಿಕೆ ಆಗುತ್ತಿಲ್ಲ. ನಿಯಂತ್ರಣದಲ್ಲಿದೆ’ ಎಂದು ತಿಳಿಸಿದರು.</p>.<p><strong>ಸಾಮಾಜಿಕ ಅಂತರ ನೀತಿ: </strong>ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನೀತಿ,ಸೋಂಕುಪ್ರಕರಣಗಳನ್ನು ಪತ್ತೆ ಮಾಡಲು ಕಟ್ಟುನಿಟ್ಟಿನ ಕ್ರಮ, ಎಲ್ಲ ನಿವಾಸಿಗಳು ಮನೆಯಲ್ಲಿಯೇ ಸ್ವಯಂ ನಿರ್ಬಂಧಕ್ಕೆ ಒಳಗಾಗುವ ಕ್ರಮಗಳಿಂದಸೋಂಕುತಡೆಯುವ ವಿಶ್ವಾಸವನ್ನು ಗೃಹ ಸಚಿವಾಲಯ ಹೊಂದಿದೆ.</p>.<p>ಸರ್ಕಾರ ಮತ್ತು ಸಮುದಾಯ ಒಟ್ಟಾಗಿಸೋಂಕುತಡೆಗೆ ಕಾರ್ಯನಿರ್ವಹಿಸದೇ ಇದ್ದಲ್ಲಿ ಸಮುದಾಯಕ್ಕೂ ವ್ಯಾಪಿಸುವ ಸಾಧ್ಯತೆಯಿದೆ. ಇದನ್ನು ತಪ್ಪಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮನೆಯಲ್ಲೇ ನಿರ್ಬಂಧದಲ್ಲಿ ಇರುವುದು ಅಗತ್ಯ ಎಂದು ಅಗರವಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ):</strong> ಮಾರಕವಾದ ಕೊರೊನಾ ವೈರಾಣುಸೋಂಕುಸಮುದಾಯದಲ್ಲಿ ವ್ಯಾಪಕವಾಗಿ ಹರಡಬಹುದು ಎಂಬುದಕ್ಕೆ, ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.</p>.<p>ಈ ಮೂಲಕಸೋಂಕುಹರಡುವ ವೇಗ ದೇಶದಲ್ಲಿ ಮೂರನೇ ಹಂತಕ್ಕೆ ಪ್ರವೇಶಿಸಿದೆ ಎಂದು ಹಬ್ಬಿದ್ದ ವದಂತಿಗೆ ತೆರೆ ಎಳೆದಿದ್ದು, ಇಂಥ ವದಂತಿಯಿಂದ ದುಗುಡಕ್ಕೆ ಒಳಗಾಗಿದ್ದ ಜನರಿಗೂ ಸ್ವಲ್ಪ ಮಟ್ಟಿಗಿನ ನೆಮ್ಮದಿಯನ್ನು ನೀಡಿದೆ. ಈ ಮಧ್ಯೆ,ಸೋಂಕುಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.</p>.<p>ಸೋಂಕುಹರಡುವುದನ್ನು ತಡೆಯುವ ಕ್ರಮವಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ನಿರ್ಬಂಧ ಮತ್ತು ಪೊಲೀಸರ ಕಟ್ಟೆಚ್ಚರದ ನಡುವೆಯೂ ಜನರು ಇವುಗಳನ್ನು ಉಲ್ಲಂಘಿಸಿ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಬೆಳವಣಿಗೆಯು ಆತಂಕವನ್ನು ಹೆಚ್ಚಿಸುತ್ತಿದೆ.</p>.<p>ಸೋಂಕುಏರಿಕೆ ಪ್ರಮಾಣ ಸ್ಥಿರವಾಗಿದೆ. ಹೀಗಾಗಿ,ಸೋಂಕುಸಮುದಾಯದಲ್ಲಿ ಸಾಂಕ್ರಾಮಿಕ ಆಗಬಹುದು ಎಂಬುದಕ್ಕೆ ಯಾವುದೇ ನಿದರ್ಶನವಿಲ್ಲ. ಹಾಗೆಂದೂ, ಈಗ ಜಾರಿಯಲ್ಲಿರುವ ನಿರ್ಬಂಧಗಳನ್ನು ಈ ಹಂತದಲ್ಲಿ ಸಡಿಲಿಸುವ ಸ್ಥಿತಿಯೂ ಇಲ್ಲ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.</p>.<p>ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು, `ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಒಟ್ಟಾರೆಯಾಗಿ ಪರಿಸ್ಥಿತಿ ಸ್ಥಿರವಾಗಿದೆ. ಯಾವ ಪ್ರಮಾಣದಲ್ಲಿಸೋಂಕುಏರಿಕೆ ಆಗಬೇಕಿತ್ತೋ ಆ ಪ್ರಮಾಣದಲ್ಲಿ ಏರಿಕೆ ಆಗುತ್ತಿಲ್ಲ. ನಿಯಂತ್ರಣದಲ್ಲಿದೆ’ ಎಂದು ತಿಳಿಸಿದರು.</p>.<p><strong>ಸಾಮಾಜಿಕ ಅಂತರ ನೀತಿ: </strong>ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನೀತಿ,ಸೋಂಕುಪ್ರಕರಣಗಳನ್ನು ಪತ್ತೆ ಮಾಡಲು ಕಟ್ಟುನಿಟ್ಟಿನ ಕ್ರಮ, ಎಲ್ಲ ನಿವಾಸಿಗಳು ಮನೆಯಲ್ಲಿಯೇ ಸ್ವಯಂ ನಿರ್ಬಂಧಕ್ಕೆ ಒಳಗಾಗುವ ಕ್ರಮಗಳಿಂದಸೋಂಕುತಡೆಯುವ ವಿಶ್ವಾಸವನ್ನು ಗೃಹ ಸಚಿವಾಲಯ ಹೊಂದಿದೆ.</p>.<p>ಸರ್ಕಾರ ಮತ್ತು ಸಮುದಾಯ ಒಟ್ಟಾಗಿಸೋಂಕುತಡೆಗೆ ಕಾರ್ಯನಿರ್ವಹಿಸದೇ ಇದ್ದಲ್ಲಿ ಸಮುದಾಯಕ್ಕೂ ವ್ಯಾಪಿಸುವ ಸಾಧ್ಯತೆಯಿದೆ. ಇದನ್ನು ತಪ್ಪಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮನೆಯಲ್ಲೇ ನಿರ್ಬಂಧದಲ್ಲಿ ಇರುವುದು ಅಗತ್ಯ ಎಂದು ಅಗರವಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>