ಈ ನಡುವೆ ಪಾಕಿಸ್ತಾನದ ಪ್ರಜೆಯೊಬ್ಬರು ಅಭಿನಂದನ್ ಅವರನ್ನು ಶೀಘ್ರ ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಹೇಳಿ ಇಸ್ಲಾಮಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವರ್ಧಮಾನ್ ಅವರು ನಮ್ಮ ದೇಶದ ಮೇಲೆ ದಾಳಿಮಾಡಿ ತಪ್ಪೆಸಗಿದ್ದಾರೆ. ಹಾಗಾಗಿ ಅವರ ವಿಚಾರಣೆ ಮಾಡಬೇಕು ಎಂದು ಅರ್ಜಿದಾರಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಭಾರತೀಯ ವಾಯುಪಡೆಯ ಪೈಲಟ್ನ್ನು ಹಸ್ತಾಂತರಿಸುವ ಪಾಕ್ ಸರ್ಕಾರದ ನಿರ್ಧಾರವನ್ನು ತಡೆಯಬೇಕೆಂದು ಮನವಿ ಮಾಡಿರುವ ಅರ್ಜಿದಾರ, ಅಭಿನಂದನ್ ಪಾಕಿಸ್ತಾನಕ್ಕೆ ಬಾಂಬ್ ಹಾಕಲು ಗಡಿ ದಾಟಿ ಬಂದಿದ್ದಾರೆ. ಹಾಗಾಗಿ ಅವರು ಅಪರಾಧ ಮಾಡಿದ್ದು, ಪಾಕ್ ನ್ಯಾಯಾಲಯ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದರು.