ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ, ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್ 21ರಂದು ದೆಹಲಿಯ ಅವರ ನಿವಾಸದಲ್ಲಿ ಬಂಧಿಸಿದ ಸಿಬಿಐ ನಂತರ ವಿಚಾರಣೆ ನಡೆಸಿದ್ದು ಈಗ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. 2007ರಲ್ಲಿ ವಿದೇಶಿ ಬಂಡವಾಳವನ್ನು ಐಎನ್ ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ ಹೂಡಿಕೆ ಮಾಡಲು ಸರ್ಕಾರದ ಪರವಾಗಿ ಲಂಚ ಪಡೆದು ಒಪ್ಪಿಗೆ ನೀಡಲಾಗಿದೆ ಎಂದು ಚಿದಂಬರಂ ವಿರುದ್ಧ ಆರೋಪಿಸಲಾಗಿದೆ. ಆ ಸಮಯದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿತ್ತು. ಪಿ.ಚಿದಂಬರಂ ಅವರು ವಿತ್ತ ಸಚಿವರಾಗಿದ್ದರು.