‘ಇಂಡಿಯಾ ಟುಡೆ’ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಶಾ, ‘ಪುಲ್ವಾಮಾದಲ್ಲಿ ಭದ್ರತಾಪಡೆಗಳ ಬಸ್ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದನ್ನು ಭಾರತ ಹಗುರವಾಗಿ ತೆಗೆದುಕೊಳ್ಳಲಿಲ್ಲ. ವಾಯುದಾಳಿಯ ನಂತರ ಪಾಕಿಸ್ತಾನವು ಜಾಗತಿಕವಾಗಿ ಏಕಾಂಗಿಯಾಗಿದೆ. ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲೇಬೇಕಾದ ಒತ್ತಡವನ್ನು ಕ್ಷಿಪ್ರಗತಿಯಲ್ಲಿ ಪಾಕಿಸ್ತಾನದ ಮೇಲೆ ಹೇರಿದ್ದು ನಮ್ಮ ರಾಜತಾಂತ್ರಿಕ ವಿಜಯ’ ಎಂದು ಅವರು ವಿವರಿಸಿದರು.