<p><strong>ತಿರುವನಂತಪುರ:</strong>ಜಾತ್ಯತೀತಮೌಲ್ಯಗಳನ್ನು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡ ಕೆಲವೇ ದಿನಗಳಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆಯ ಪರಿಣಾಮವಾಗಿ ಸಮಾಜದ ದೊಡ್ಡ ವರ್ಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಬಯಸುವವರು ಒಗ್ಗಟ್ಟಾಗಬೇಕಾದ ಸಮಯವಿದು’ ಎಂದು ಪಿಣರಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಸಿಎಎ ರದ್ದುಗೊಳಿಸಬೇಕು ಎಂದು ಕೇರಳ ವಿಧಾನಸಭೆಯಲ್ಲಿ ಮಂಗಳವಾರ ಆಡಳಿತಾರೂಢ ಸಿಪಿಐ(ಎಂ) ನಿಲುವಳಿ ಮಂಡಿಸಿತ್ತು. ಪ್ರತಿಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಿಲುವಳಿಗೆ ಬೆಂಬಲ ಸೂಚಿಸಿತ್ತು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/kerala-assembly-passes-resolution-against-caa-694705.html" target="_blank">ಸಿಎಎ ರದ್ದತಿಗೆ ನಿರ್ಣಯ: ಕೇರಳ ವಿಧಾನಸಭೆಯಲ್ಲಿ ಮೂಡಿದ ಒಮ್ಮತ</a></p>.<p><a href="https://www.prajavani.net/stories/national/kerala-cm-pinarayi-vijayan-on-resolution-against-caa-state-assemblies-have-their-own-privileges-694814.html" target="_blank">ವಿಧಾನಸಭೆಗಳಿಗೆ ವಿಶೇಷ ಹಕ್ಕಿದೆ: ಸಿಎಎ ವಿರುದ್ಧದ ನಿರ್ಣಯ ಸಮರ್ಥಿಸಿದ ಕೇರಳ ಸಿಎಂ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong>ಜಾತ್ಯತೀತಮೌಲ್ಯಗಳನ್ನು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡ ಕೆಲವೇ ದಿನಗಳಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆಯ ಪರಿಣಾಮವಾಗಿ ಸಮಾಜದ ದೊಡ್ಡ ವರ್ಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಬಯಸುವವರು ಒಗ್ಗಟ್ಟಾಗಬೇಕಾದ ಸಮಯವಿದು’ ಎಂದು ಪಿಣರಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಸಿಎಎ ರದ್ದುಗೊಳಿಸಬೇಕು ಎಂದು ಕೇರಳ ವಿಧಾನಸಭೆಯಲ್ಲಿ ಮಂಗಳವಾರ ಆಡಳಿತಾರೂಢ ಸಿಪಿಐ(ಎಂ) ನಿಲುವಳಿ ಮಂಡಿಸಿತ್ತು. ಪ್ರತಿಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಿಲುವಳಿಗೆ ಬೆಂಬಲ ಸೂಚಿಸಿತ್ತು.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/national/kerala-assembly-passes-resolution-against-caa-694705.html" target="_blank">ಸಿಎಎ ರದ್ದತಿಗೆ ನಿರ್ಣಯ: ಕೇರಳ ವಿಧಾನಸಭೆಯಲ್ಲಿ ಮೂಡಿದ ಒಮ್ಮತ</a></p>.<p><a href="https://www.prajavani.net/stories/national/kerala-cm-pinarayi-vijayan-on-resolution-against-caa-state-assemblies-have-their-own-privileges-694814.html" target="_blank">ವಿಧಾನಸಭೆಗಳಿಗೆ ವಿಶೇಷ ಹಕ್ಕಿದೆ: ಸಿಎಎ ವಿರುದ್ಧದ ನಿರ್ಣಯ ಸಮರ್ಥಿಸಿದ ಕೇರಳ ಸಿಎಂ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>