ನವದೆಹಲಿ: ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಬುಧವಾರ ಕಾರ್ನಟ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಸುಸ್ಥಿರ ಇಂಧನ ಪರಿಹಾರಕ್ಕೆ ನೀಡಿದ ಕೊಡುಗೆಗೆ ಅಮೆರಿಕದ ‘ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ ಸ್ಕೂಲ್ ಆಫ್ ಡಿಸೈನ್’ ಈ ಪ್ರಶಸ್ತಿಯನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ನೀಡಿತ್ತು.
ಆದರೆ, ಅಮೃತಸರದಲ್ಲಿ ನಡೆದ ರೈಲು ದುರಂತದಲ್ಲಿ 60 ಮಂದಿ ಮೃತಪಟ್ಟಿದ್ದ ಕಾರಣ ಪ್ರಶಸ್ತಿ ಸ್ವೀಕರಿಸಲು ಪಿಯೂಷ್ ಗೋಯಲ್ ಹೋಗಿರಲಿಲ್ಲ. ಹೀಗಾಗಿ ಪ್ರಶಸ್ತಿ ನೀಡಲು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ತಂಡ ದೆಹಲಿಗೆ ಬಂದಿದೆ. ಇದೇ 30ರಂದು ಪ್ರಶಸ್ತಿ ಪ್ರದಾನ ಮಾಡಲಿದೆ.
ದೇಶದ ವಿದ್ಯುತ್ ಕ್ಷೇತ್ರದ ಸುಧಾರಣೆಗೆ ಅವರ ಕೈಗೊಂಡ ಕ್ರಮಗಳು ಮತ್ತು 18,000 ಹಳ್ಳಿಗಿಗೆ ವಿದ್ಯುತ್ ಸಂಪರ್ಕ ವಿಸ್ತರಿಸಿದ್ದಕ್ಕೆ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.