‘ಇನ್ನೆರಡು ದಿನಗಳಲ್ಲಿ ಪ್ಲಾಸ್ಮಾ ಬ್ಯಾಂಕ್ ಕಾರ್ಯಾರಂಭ ಮಾಡಲಿದೆ. ಸರ್ಕಾರವು ಈವರೆಗೆ 29 ರೋಗಿಗಳ ಮೇಲೆ ಪ್ಲಾಸ್ಮಾ ಚಿಕಿತ್ಸೆಯ ಪ್ರಯೋಗ ನಡೆಸಿದ್ದು, ಪ್ರೋತ್ಸಾಹದಾಯಕ ಫಲಿತಾಂಶ ಲಭಿಸಿದೆ. ತಮ್ಮ ಪ್ಲಾಸ್ಮಾವನ್ನು ದಾನವಾಗಿ ನೀಡುವಂತೆ ಕೋವಿಡ್ಗೆ ಒಳಗಾಗಿ ಗುಣಮುಖರಾದವರಲ್ಲಿ ಆಮ್ ಆದ್ಮಿ ಪಕ್ಷವು ಮನವಿ ಮಾಡಲಿದೆ. ಪ್ಲಾಸ್ಮಾ ದಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಸಲುವಾಗಿ ಸಹಾಯವಾಣಿಯನ್ನೂ ಶೀಘ್ರದಲ್ಲೇ ಆರಂಭಿಸಲಾಗುವುದು’ ಎಂದು ಆನ್ಲೈನ್ ಮೂಲಕ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಅವರು ತಿಳಿಸಿದರು.