<p><strong>ನವದೆಹಲಿ</strong>: <a href="https://www.prajavani.net/tags/citizenship-amendment-act-0" target="_blank">ಪೌರತ್ವ ತಿದ್ದುಪಡಿ ಕಾಯ್ದೆ</a> ವಿರೋಧಿಸಿ ದೆಹಲಿಯ ಶಾಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಅಲ್ಲಿಂದ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ಫೆಬ್ರುವರಿ 10 ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ಸಮಸ್ಯೆ ನಮಗೆ ಅರ್ಥವಾಗಿದೆ. ದೆಹಲಿ ಚುನಾವಣೆ ಮುಗಿದ ನಂತರವೇ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದಿದೆ.</p>.<p>ದೆಹಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ.</p>.<p>ವಕೀಲ ಅಮಿತ್ ಸಹ್ನಿ ಅವರು ಸಲ್ಲಿಸಿದ ಅರ್ಜಿಯನ್ನು ಮುಂದಿನ ಭಾನುವಾರ ವಿಚಾರಣೆಗೊಳಪಡಿಸಲಾಗುವುದು ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರ ನ್ಯಾಯಪೀಠ ಹೇಳಿದೆ.</p>.<p>ಶಾಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ, ವಾಹನಗಳಿಗೆ ಸಂಚರಿಸಲು ಅಡಚಣೆಯುಂಟಾಗಿದೆ. ರಸ್ತೆ ಬಂದ್ ಆಗಿರುವುದರಿಂದ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಹೆಚ್ಚು ಸಮಯ ಬೇಕಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: <a href="https://www.prajavani.net/tags/citizenship-amendment-act-0" target="_blank">ಪೌರತ್ವ ತಿದ್ದುಪಡಿ ಕಾಯ್ದೆ</a> ವಿರೋಧಿಸಿ ದೆಹಲಿಯ ಶಾಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಅಲ್ಲಿಂದ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ಫೆಬ್ರುವರಿ 10 ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ಸಮಸ್ಯೆ ನಮಗೆ ಅರ್ಥವಾಗಿದೆ. ದೆಹಲಿ ಚುನಾವಣೆ ಮುಗಿದ ನಂತರವೇ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದಿದೆ.</p>.<p>ದೆಹಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ.</p>.<p>ವಕೀಲ ಅಮಿತ್ ಸಹ್ನಿ ಅವರು ಸಲ್ಲಿಸಿದ ಅರ್ಜಿಯನ್ನು ಮುಂದಿನ ಭಾನುವಾರ ವಿಚಾರಣೆಗೊಳಪಡಿಸಲಾಗುವುದು ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರ ನ್ಯಾಯಪೀಠ ಹೇಳಿದೆ.</p>.<p>ಶಾಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ, ವಾಹನಗಳಿಗೆ ಸಂಚರಿಸಲು ಅಡಚಣೆಯುಂಟಾಗಿದೆ. ರಸ್ತೆ ಬಂದ್ ಆಗಿರುವುದರಿಂದ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಹೆಚ್ಚು ಸಮಯ ಬೇಕಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>